ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ, ಶೈಕ್ಷಣಿಕ, ಆಂತರಿಕ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಒಟ್ಟಾಗಿ ಕೆಲಸ ಮಾಡಿದಲ್ಲಿ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ನಾಯಕರೊಂದಿಗೆ ನಡೆಸಿದ ಅಂತರ್ ರಾಜ್ಯ ಸಹಕಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅಂತರ್ ರಾಜ್ಯ ಸಮಿತಿಯು ಸಹಕಾರ ಒಕ್ಕೂಟ ವ್ಯವಸ್ಥೆ ಮೌಲ್ಯಗಳಿಗೆ ಮಾತ್ರ ಒತ್ತು ನೀಡಬಾರದು. ರಾಷ್ಟ್ರದ ಅಭಿವೃದ್ಧಿಗೆ ರಾಜ್ಯಗಳು ಒಮ್ಮತದೊಂದಿಗೆ ಮುಕ್ತ ಚರ್ಚೆಗಳಲ್ಲಿ ಪಾಲ್ಗೊಳ್ಳಬೇಕು ಪ್ರಧಾನಿ ಮೋದಿ ಒತ್ತಾಯಿಸಿದರು.
ಮೋದಿ ಸರ್ಕಾರ ‘ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಒತ್ತು ನೀಡಿದ್ದು, ಇದು ಅಮೇರಿಕದ ಡ್ಯುಯಲ್ ಫೆಡೆರಲ್ ವ್ಯವಸ್ಥೆಗೆ ಸಮಾನವಾಗಿದ್ದು, ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸಲು ಒಪ್ಪಿಗೆ ನೀಡಿದ್ದು, ರಾಜ್ಯ ಸರ್ಕಾರಗಳು ಗುರಿ ತಲುಪಲು ಕೇಂದ್ರದೊಂದಿಗೆ ಸಹಕರಿಸಬೇಕು ಎಂದು ಹೇಳಿದ್ದಾರೆ.
ದೇಶವನ್ನು ಮುನ್ನಡೆಸಲು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವುದು ಅಗತ್ಯ. ಪೊಲೀಸ್ ಮತ್ತು ಭದ್ರತಾ ಸವಾಲುಗಳನ್ನು ಎದುರಿಸಲು ರಾಜ್ಯಗಳು ಸಹಕರಿಸಬೇಕು.
ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಗಳು ಆರ್ಥಿಕತೆ ಹೆಚ್ಚಿಸಲು ಚಿಮಣಿ ಎಣ್ಣೆ ಸಬ್ಸಿಡಿಗಳನ್ನು ಕಡಿತಗೊಳಿಸಬೇಕು. ದೇಶದ ಶೇ.79 ರಷ್ಟು ಜನಸಂಖ್ಯೆ ಆಧಾರ್ ಕಾರ್ಡ್ ಹೊಂದಿದ್ದು, ಪ್ರಮುಖ ವಿಚಾರವಾಗಿದೆ. ಆಧಾರ್ ಹೊಂದಿದವರು ನಗದು ನೇರ ವರ್ಗಾವಣೆ ಮತ್ತು ಪಾರದರ್ಶಕ ಸೇವೆಗಳನ್ನು ತರಲು ಸಾಧ್ಯ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.