ಬೆಂಗಳೂರು : ಡಿವೈಎಸ್ಪಿ ಗಣಪತಿ ಅತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಕೆ.ಜೆ. ಜಾರ್ಜ್ ಹಾಗೂ ಪೊಲೀಸ್ ಅಧಿಕಾರಿಗಳಾದ ಮೊಹಂತಿ ಹಾಗೂ ಪ್ರಸಾದ್ ವಿರುದ್ಧ ಇಂದು ಮಡಿಕೇರಿಯ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.
ಇದರನ್ವಯ ಇಂದು ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಆದರೆ ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಅಂಗೀಕರಿಸಿಲ್ಲ. ಹೆಚ್ಚುವರಿ ಅಡ್ವೋಕೇಟ್ ಪೊನ್ನಣ್ಣ ಅವರನ್ನು ಕರೆಸಿಕೊಂಡು ಅವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಅಹ್ಮದ್ ಪಟೇಲ್ ಅವರು ಜಾರ್ಜ್ ಅವರ ರಾಜೀನಾಮೆಯನ್ನು ಸದ್ಯಕ್ಕೆ ಅಂಗೀಕರಿಸದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ಇನ್ನು ಅಹ್ಮದ್ ಪಟೇಲ್ ಅವರ ಸೂಚನೆ ಬಂದಲ್ಲಿ ಮಾತ್ರ ರಾಜೀನಾಮೆ ಅಂಗೀಕಾರ ಮಾಡಲಾಗುತ್ತದೆ ಎಂಬ ಮಾತುಗಳೂ ಕೇಳಿಬರುತ್ತಿದೆ.
ಇನ್ನು ಪೊಲೀಸ್ ಅಧಿಕಾರಿಗಳಾದ ಮೊಹಂತಿ ಹಾಗೂ ಪ್ರಸಾದ್ ಅವರಿಗೆ ಕಡ್ಡಾಯ ರಜೆ ನೀಡುವತ್ತ ಸರ್ಕಾರ ಚಿಂತಿಸುತ್ತಿದೆ ಎನ್ನಲಾಗಿದೆ.
ರಾಜ್ಯದ ಜನರ ಹೋರಾಟಕ್ಕೆ ಸಂದ ಜಯ ಇದು ಎಂದು ಬಣ್ಣಿಸಲಾಗುತ್ತಿದ್ದು, ಡಿವೈಎಸ್ಪಿ ಗಣಪತಿ ಅವರ ಪತ್ನಿ ಹಾಗೂ ಪುತ್ರ ಇವರು ಎಫ್ಐಆರ್ ಪತ್ರ ಸಿಕ್ಕ ನಂತರ ಹೈಕೋರ್ಟ್ಗೆ ಮೊರೆ ಹೋಗುತ್ತೇವೆ. ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದಿದ್ದಾರೆ.
ಬರೀ ರಾಜೀನಾಮೆ ನೀಡಿದರೆ ಸಾಕಾಗುವುದಿಲ್ಲ. ನಿಷ್ಪಕ್ಷಪಾತ ತನಿಖೆಯಾಗಬೇಕು ಇಲ್ಲದಿದ್ದಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಬಿಜೆಪಿ ಆಗ್ರಹಿಸಿದೆ.
ಸಚಿವ ಜಾರ್ಜ್ ರಾಜೀನಾಮೆ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಮಡಿಕೇರಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.