ನವದೆಹಲಿ: ಜಿಎಸ್ಟಿ ಮಸೂದೆಯನ್ನು ಅನುಮೋದನೆಗೊಳಿಸಲು ನರೇಂದ್ರ ಮೋದಿ ನಡೆಸುತ್ತಿರುವ ಪ್ರಯತ್ನಕ್ಕೆ ಫಲ ದೊರೆಯುವಂತೆ ಕಂಡು ಬರುತ್ತಿದೆ. ಕಾಂಗ್ರೆಸ್ ಮಸೂದೆ ಜಾರಿಗೆ ಸಹಕರಿಸುವ ಸೂಚನೆ ನೀಡಿದೆ, ಬಿಜೆಪಿ ಅದು ಇಟ್ಟಿರುವ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ.
ವರದಿಗಳ ಪ್ರಕಾರ ಸುಧೀರ್ಘ ಸಮಯದಿಂದ ಬಾಕಿ ಉಳಿದಿರುವ ಜಿಎಸ್ಟಿ ಮಸೂದೆಯ ಬಗ್ಗೆ ಅಂತಿಮ ಚರ್ಚೆ ನಡೆಸಲು ಬಿಜೆಪಿ ಮತ್ತು ಕಾಂಗ್ರೆಸ್ ಒಪ್ಪಿಕೊಂಡಿದೆ. ಸಂಸತ್ತು ವ್ಯವಹಾರಗಳ ಸಚಿವಾಲಯ ಈ ಬಗ್ಗೆ ರಾಜ್ಯಸಭೆಯಲ್ಲಿ ಸುಧೀರ್ಘ ೫ ಗಂಟೆಗಳ ಕಾಲ ಚರ್ಚೆ ನಡೆಸಲು ಯೋಜನೆ ರೂಪಿಸಿದೆ. ಈ ಬಗ್ಗೆ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ ಎನ್ನಲಾಗಿದೆ.
ಜಿಎಸ್ಟಿಯ ಅಂತಿಮ ಘಟ್ಟಕ್ಕೆ ತಲುಪುವ ಭರವಸೆಯಲ್ಲಿರುವ ಸರ್ಕಾರ, ಕಾಂಗ್ರೆಸ್ನೊಂದಿಗಿನ ಭಿನ್ನಾಭಿಪ್ರಾಯ ಶಮನಗೊಳಿಸಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದೆ, ಇತರ ಪಕ್ಷಗಳನ್ನೂ ಈ ವಿಷಯದಲ್ಲಿ ತಲುಪು ಪ್ರಯತ್ನಿಸುತ್ತಿರುವುದಾಗಿ ಪ್ರಧಾನಿ ಸೋಮವಾರ ತಿಳಿಸಿದ್ದರು.
ಕೆಲ ದಿನಗಳ ಹಿಂದೆ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಜಿಎಸ್ಟಿ ವಿಷಯವಾಗಿ ಸಭೆ ನಡೆದಿತ್ತು, ಈ ವೇಳೆ ಜೇಟ್ಲಿ ಮನವೊಲಿಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಒಟ್ಟಿನಲ್ಲಿ ಕಾಂಗ್ರೆಸ್ ಜಿಎಸ್ಟಿಗೆ ಸಹಕರಿಸಿದರೆ ಮಸೂದೆ ಜಾರಿಗೆ ಬರುವುದು ಶತಸಿದ್ಧ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.