ನವದೆಹಲಿ: ಫೆಬ್ರವರಿ 19ರ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಮತ್ತೊಂದು ಹೊಸ ಬೆಳವಣಿಗೆ ನಡೆದಿದೆ. ಮುಂದಿನ ಸೆಮಿಸ್ಟರ್ಗೆ ಆರೋಪಿತ ವಿದ್ಯಾರ್ಥಿ ನಾಯಕರಾದ ಕನ್ಹಯ್ಯ ಕುಮಾರ್, ಉಮರ್ ಖಲೀದ್ ಸೇರಿದಂತೆ ಒಟ್ಟು 19 ವಿದ್ಯಾರ್ಥಿಗಳ ರಿಜಿಸ್ಟ್ರೇಶನನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಡೆ ಹಿಡಿದಿದೆ.
ಸಂಸತ್ತು ದಾಳಿಯ ರುವಾರಿ ಅಫ್ಜಲ್ ಗುರು ಪರವಾದ ಘೋಷಣೆಗಳನ್ನು ಕೂಗಿದ ಆರೋಪಕ್ಕೆ ಒಳಗಾಗಿ ಕನ್ಹಯ್ಯ ಮತ್ತು ಉಮರ್ ಖಲೀದ್ ಕೆಲ ದಿನಗಳ ಕಾಲ ಜೈಲಿನಲ್ಲಿದ್ದರು. ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು.
ಇದೀಗ ಮುಂದಿನ ಸೆಮಿಸ್ಟರ್ಗೆ 21 ವಿದ್ಯಾರ್ಥಿಗಳ ರಿಜಿಸ್ಟ್ರೇಶನ್ನನ್ನು ತಡೆಯಲಾಗಿದೆ. ಈ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಕನ್ಹಯ್ಯ, ಖಲೀದ್ ಕೂಡ ಇದ್ದಾರೆ. ಈ ಪಟ್ಟಿಯನ್ನು ರಿಜಿಸ್ಟ್ರಾರ್ ಪ್ರಮೋದ್ ಕುಮಾರ್ ಬಿಡುಗಡೆ ಮಾಡಿದ್ದಾರೆ.
ಇದಕ್ಕೆ ಕಾರಣ ಏನು ಎಂಬ ಬಗ್ಗೆ ವಿಶ್ವವಿದ್ಯಾಲಯ ಮೌನವಾಗಿದೆ, ಆದರೆ ವಿದ್ಯಾರ್ಥಿಗಳು ಇದನ್ನು ಖಂಡಿಸಿದ್ದು, ಇದು ಕೋರ್ಟ್ ಆದೇಶದ ಉಲ್ಲಂಘನೆ ಎಂದಿದ್ದಾರೆ. ಪ್ರತಿಭಟನೆಗೂ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.