ನವದೆಹಲಿ: ಇಂದು ಲೋಕಸಭೆಯ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಬಿಎಸ್ ಯಡಿಯೂರಪ್ಪ ಅವರು ಡಿವೈಎಸ್ಪಿ ಎಂ. ಕೆ. ಗಣಪತಿ ಮತ್ತು ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿದರು.
ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ರಾಜ್ಯದಲ್ಲಿ ನಡೆದಿರುವ ಈ ಎರಡು ಪ್ರಕರಣಗಳನ್ನು ಕುರಿತು ಪ್ರಸ್ತಾಪಿಸಿದರು. ಕನ್ನಡದಲ್ಲಿಯೇ ಮಾತನಾಡಿದ ಬಿಎಸ್ವೈ ಅವರು ಈ ಮೂಲಕ ಎಲ್ಲರ ಗಮನ ಸೆಳೆದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಅಧಿಕಾರಿಗಳಿಗೆ ಕಿರುಕುಳದ ಭಾಗ್ಯ ಸಿಗುತ್ತಿರುವುದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ರಾಜಕಾರಣದಲ್ಲಿ ಈ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ರಾಜ್ಯದ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದಕ್ಕಾಗಿ ರಾಜ್ಯದ ಕಾಂಗ್ರೆಸ್ ಸಂಸದರು ರಾಜ್ಯದ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡಬಾರದು ಎಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ ಆಕ್ಷೇಪ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.