ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಿವೃತ್ತ ಸೇನಾ ಯೋಧ ಕ್ಯಾಪ್ಟನ್ ಬಾಲಕೃಷ್ಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು. ಭಾರತ-ಚೀನಾ ಯುದ್ಧ, ಭಾರತ-ಪಾಕ್ ಯುದ್ಧ ಹಾಗೂ ಕಾರ್ಗಿಲ್ ಕದನಗಳಲ್ಲಿ ಪ್ರತ್ಯಕ್ಷವಾಗಿ ಪಾಲ್ಗೊಂಡಿದ್ದ ಕ್ಯಾಪ್ಟನ್ ಬಾಲಕೃಷ್ಣ ಅವರನ್ನು ಈ ಸಂದರ್ಭ ಶಾರದಾ ವಿದ್ಯಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕ್ಯಾ| ಬಾಲಕೃಷ್ಣರವರು ವಿದ್ಯಾರ್ಥಿಗಳಿಗೆ ಸೇನೆಗೆ ಸೇರುವ ಮಹತ್ವವನ್ನು ತಿಳಿಸಿ ಸೈನ್ಯಕ್ಕೆ ಸೇರುವಂತೆ ಸಲಹೆ ನೀಡಿದರು. ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕರು ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ಹಾಗೂ ಅನೇಕ ಯುದ್ಧಗಳಲ್ಲಿ ಪಾಲ್ಗೊಂಡ ವೀರ ಯೋಧರ ಸಾಹಸಗಾಥೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ವೇದಿಕೆಯಲ್ಲಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಕೆ.ಎಸ್.ಕಲ್ಲೂರಾಯ, ಟ್ರಸ್ಟಿಗಳಾದ ಶ್ರೀ ಪ್ರದೀಪ ಕುಮಾರ ಕಲ್ಕೂರಾ, ಶಾರದಾ ಕಾಲೇಜಿನ ಪ್ರಾಂಶುಪಾಲ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರಧ್ವಾಜ್, ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಪತಿ ರಾವ್, ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಸುನೀತಾ ವಿ ಮಡಿ, ಉಪ-ಪ್ರಾಂಶುಪಾಲ ಶ್ರೀ ದಯಾನಂದ ಕಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗೈಡ್ ವಿದ್ಯಾರ್ಥಿನಿ ಕು| ವೈಷ್ಣವಿ ಕಾರ್ಗಿಲ್ ಯುದ್ಧದ ಘಟನೆಯ ಬಗ್ಗೆ ಕಿರುಭಾಷಣಗೈದಳು. ವಿದ್ಯಾಲಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಗೈಡ್ ಕು| ಸಾಕ್ಷಿ ಸಿ ಶೆಟ್ಟಿ ಸ್ವಾಗತಿಸಿದರೆ, ಕು| ವರ್ಷಾ ಆರ್ ಧನ್ಯವಾದವಿತ್ತಳು. ಕು| ಸಾಕ್ಷಿ ವಿ ಶೆಟ್ಟಿ ಕಾರ್ಯಕ್ರಮ ನಿರ್ವಹಣೆಗೈದಳು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.