ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ ಮಸೂದೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಉತ್ಪಾದನೆ ಮೇಲಿನ ಶೇ.1ರಷ್ಟು ಹೆಚ್ಚುವರಿ ತೆರಿಗೆಯನ್ನು ಸಚಿವ ಸಂಪುಟ ಕೈಬಿಟ್ಟಿದೆ. ಅಲ್ಲದೇ ಮೊದಲ 5 ವರ್ಷದಲ್ಲಿ ರಾಜ್ಯಗಳ ಆದಾಯ ನಷ್ಟ ಸಂಭವಿಸಿದಲ್ಲಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಯಾವುದೇ ವಿವಾದ ಉಂಟಾದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ ಜಿಎಸ್ಟಿ ಮಂಡಳಿ ನಿರ್ಣಗಳನ್ನು ಕೈಗೊಳ್ಳುವ ಬಗ್ಗೆ ಸಾಂವಿಧಾನಕ ತಿದ್ದುಪಡಿ ಬಿಲ್ನಲ್ಲಿ ಸೇರಿಸಲು ನಿರ್ಧರಿಸಿದೆ.
ಸಚಿವ ಸಂಪುಟ ಹಾಗೂ ರಾಜ್ಯ ಸರ್ಕಾರಗಳು ತಿದ್ದುಪಡಿಗೆ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರ ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಜಿಎಸ್ಟಿ ಮಸೂದೆ ಅಂಗೀಕರಿಸುವ ನಿರೀಕ್ಷೆ ಹೊಂದಿದೆ.
ರಾಜ್ಯ ಸಭೆಯಲ್ಲಿ ವಿರೋಧ ಪಕ್ಷಗಳ ಸಂಖ್ಯೆ ಹೆಚ್ಚಿದ್ದು, ಅವರ ಬೆಂಬಲ ಅಗತ್ಯವಿದೆ. ವಿರೋಧ ಪಕ್ಷದ ಮೂರು ಬೇಡಿಕೆಗಳಲ್ಲಿ ಒಂದನ್ನು ಪೂರ್ಣಗೊಳಿಸಲಾಗಿದ್ದು, ಇತರ ಎರಡು ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಕಳೆದ ಆಗಸ್ಟ್ನಲ್ಲಿ ಲೋಕಸಭೆಯಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡೆಯಲಾಗಿದ್ದು, ಈ ವಾರ ಸಂತ್ತಿನಲ್ಲಿ ಚರ್ಚಿಸಿ ಅನುಮೋದನೆ ಪಡೆದ ಬಳಿಕ ರಜ್ಯಸಭೆಯಲ್ಲಿ ಮಂಡಿಸಲಿದೆ. ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಅನುಮೋದನೆ ಪಡೆದಲ್ಲಿ ಎಪ್ರಿಲ್ನಿಂದ ಜಾರಿಗೆ ಬರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.