ನವದೆಹಲಿ : ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ರವರು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಬಿ.ಸಿ.ರೋಡಿನಿಂದ ಅಡ್ಡಹೊಳೆ ಹಾಗೂ ಕುಲಶೇಖರದಿಂದ ಕಾರ್ಕಳದವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಬಗ್ಗೆ ಮತ್ತೊಮ್ಮೆ ಸರ್ವೆ ಮಾಡುವಂತೆ ಹಾಗೂ ಈ ರಸ್ತೆಗಳ ಅಗಲ 30 ಮೀಟರ್ ಸೀಮಿತಗೊಳಿಸುವಂತೆ ಮನವಿ ಸಲ್ಲಿಸಿದರು.
ಅಲ್ಲದೇ ಕೇಂದ್ರ ಸಚಿವರು ಈ ಹಿಂದೆ ಘೋಷಿಸಿದ ಮೆಲ್ಕಾರು-ತೊಕ್ಕೋಟು, ಮುಲ್ಕಿ-ಕಟೀಲು-ಬಿ.ಸಿ.ರೋಡು ಹಾಗೂ ಬಿ.ಸಿ.ರೋಡು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸಕ್ಕೆ ದಿನಾಂಕ ನಿಗದಿಪಡಿಸುವಂತೆ ಕೋರಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.