ನವದೆಹಲಿ : ಕೇಂದ್ರ ಸರ್ಕಾರ ಮುಂದಿನ ವಾರ ತೆರಿಗೆ ಸುಧಾರಣೆ ಜಿಎಸ್ಟಿ ಸುಧಾರಣೆ ಬಗ್ಗೆ ರಾಜ್ಯಸಭೆಯಲ್ಲಿ ಮಹತ್ವದ ಪ್ರಸ್ತಾವನೆಯನ್ನು ತರಲು ಯೋಜಿಸಿದೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಲುವಾಗಿ ಶುಕ್ರವಾರ ರಾತ್ರಿ ಉನ್ನತ ಸಚಿವರ ಸಭೆ ನಡೆಸಿದ್ದಾರೆ. ಮಂಗಳವಾರ ಜಿಎಸ್ಟಿ ರಾಜ್ಯಸಭೆಯಲ್ಲಿ ಪ್ರಸ್ತಾವನೆಗೊಳ್ಳುವ ಸಾಧ್ಯತೆಯಿದೆ.
ಜಿಎಸ್ಟಿ ಜಾರಿಗೆ ಸಂಬಂಧಿಸಿದಂತೆ ಕಳೆದ ಕೆಲ ವಾರಗಳಿಂದ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ನ ಮನವೊಲಿಕೆ ಕಾರ್ಯದಲ್ಲಿ ತೊಡಗಿದ್ದಾರೆ.
ವಿವಿಧ ರಾಜ್ಯ ಸರ್ಕಾರಗಳ ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಮಾತುಕತೆಯನ್ನೂ ನಡೆಸಿದ್ದಾರೆ.
ಜಿಎಸ್ಟಿ ಮಸೂದೆ ಜಾರಿ ಖಂಡಿತವಾಗಿಯೂ ಸಾಧ್ಯವಾಗಲಿದೆ. ಇದಕ್ಕೆ 3/2 ರಷ್ಟು ಬೆಂಬಲ ಸಿಗಲಿದೆ ಎಂದು ಜೇಟ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.
ಒಟ್ಟು 32 ಪಕ್ಷಗಳ ಪೈಕಿ 30 ಪಕ್ಷಗಳು ಜಿಎಸ್ಟಿಗೆ ಬೆಂಬಲ ಘೋಷಿಸಿದೆ. ಆದರೆ ಸರ್ಕಾರಕ್ಕೆ ಕಾಂಗ್ರೆಸ್ನ ಬೆಂಬಲ ಅಗತ್ಯವಾಗಿದ್ದು ಇದಕ್ಕೆ ಬೇಕಾದ ಎಲ್ಲಾ ಪ್ರಯತ್ನಗಳನ್ನೂ ಕೇಂದ್ರ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.