ಗುವಾಹಟಿ : ಮಣಿಪುರದಲ್ಲಿ ಶಸ್ತ್ರಾಸ್ತ್ರ ಪಡೆಗಳ ದೌರ್ಜವನ್ನು ಖಂಡಿಸಿ ಕಳೆದ 16 ವರ್ಷಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿರುವ ಮಾನವಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಅವರು ಚುನಾವಣೆಗೆ ಸ್ಪರ್ಧಿಸುವುದಾಗಿ ಇತ್ತೀಚೆಗೆ ಘೋಷಣೆ ಮಾಡಿದ್ದರು. ಆದರೆ ಇದೀಗ ಅವರಿಗೆ ಬೆದರಿಕೆಗಳು ಬರುತ್ತಿದ್ದು, ಚುನಾವಣೆಗೆ ಸ್ಪರ್ಧಿಸದಂತೆ ಎಚ್ಚರಿಕೆ ನೀಡಲಾಗುತ್ತಿದೆ.
ಸ್ಥಳೀಯ ಕ್ರಾಂತಿಕಾರಿ ಸಂಘಟನೆಯಾದ ಎಎಸ್ಯುಕೆ ಅವರು ಚುನಾವಣೆಗೆ ಸ್ಪರ್ಧಿಸದಂತೆ ಮತ್ತು ಹೊರಗಿನವನನ್ನು ಮದುವೆಯಾಗದಂತೆ ಅವರಿಗೆ ಎಚ್ಚರಿಕೆಯನ್ನು ನೀಡಿದೆ.
ಕೆಲ ಮಾಜಿ ಕ್ರಾಂತಿಕಾರಿ ಹೋರಾಟಗಾರರು ತಮ್ಮ ಹೋರಾಟವನ್ನು ನಿಲ್ಲಿಸಿ ಚುನಾವಣೆಗೆ ನಿಂತು ಗೆದ್ದ ಬಳಿಕ ಕೊಲ್ಲಲ್ಪಟ್ಟಿದ್ದಾರೆ. ಇದನ್ನು ಇರೋಮ್ ನೆನಪಿಟ್ಟುಕೊಳ್ಳಬೇಕು ಎಂದು ಸಂಘಟನೆ ಎಚ್ಚರಿಸಿದೆ.
ಗೋವಾ-ಬ್ರಿಟಿಷ್ ಹೋರಾಟಗಾರನೊಬ್ಬನನ್ನು ಮದುವೆಯಾಗಲು ಇರೋಮ್ ಮುಂದಾಗಿರುವುದಕ್ಕೂ ಈ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದು ಆತನು ಎನ್ಆರ್ಐ ಆದರೂ ಮಣಿಪುರ ಜನರ ದೃಷ್ಟಿಯಲ್ಲಿ ಆತ ಭಾರತೀಯನೇ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.