ನವದೆಹಲಿ: ಸ್ವಚ್ಛ ಭಾರತ ಅಭಿಯಾನ ಒಂದು ಜನಾಂದೋಲನವಾಗಬೇಕು. ಅದನ್ನು ಕೇವಲ ಸರ್ಕಾರದ ಕಾರ್ಯಕ್ರಮ ಎಂದು ಪರಿಗಣಿಸಬಾರದು ಎಂದು ದೇಶದಾದ್ಯಂತ 500 ನಗರಗಳಿಗೆ ಸ್ವಚ್ಛ ಸರ್ವೇಕ್ಷಣ 2017 (ನೈರ್ಮಲ್ಯ ಸಮೀಕ್ಷೆ) ಬಿಡುಗಡೆ ವೇಳೆ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಸ್ವಚ್ಛ ಭಾರತ ಅಭಿಯಾನವನ್ನು ಸರ್ಕಾರದ ಯೋಜನೆ ಎಂದು ಪರಿಗಣಿಸಿದಲ್ಲಿ ಅದು ಯಶಸ್ವಿಯಾಗದು. ಅದನ್ನು ಜನಾಂದೋಲನವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್ಚು-ಹೆಚ್ಚು ಜನರು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಬೇಕು ಎಂದು ನಾಯ್ಡು ಹೇಳಿದ್ದಾರೆ.
ಎರಡನೇ ಹಂತದ ಈ ಸಮೀಕ್ಷೆ ಸ್ವಚ್ಛತೆ ಮತ್ತು ನೈರ್ಮಲ್ಯ ಹೊಂದಿದ ನಗರ ಮತ್ತು ಪಟ್ಟಣಗಳನ್ನು ಆಧರಿಸಿ ರ್ಯಾಂಕ್ ನೀಡುವ ಉದ್ದೇಶದಿಂದ ಈ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ 1 ಲಕ್ಷ ಅಥವಾ ಹೆಚ್ಚು ಜನಸಂಖ್ಯೆ ಇರುವ 500 ನಗರಗಳು ಮತ್ತು ಪಟ್ಟಣಗಳು ಅಲ್ಲದೇ 1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯ ರಾಜ್ಯ ರಾಜಧಾನಿಗಳನ್ನು ಕ್ರಮಿಸಲಿದೆ. ಇದು ಪ್ರಮುಖ ಪರಂಪರೆ ಮತ್ತು ಪ್ರವಾಸಿ ತಾಣಗಳನ್ನು ಒಳಗೊಂಡಿದೆ. 500 ನಗರಗಳ ಸಮೀಕ್ಷೆ ದೇಶದ ಶೇ.70 ಜನಸಂಖ್ಯೆಯನ್ನು ಒಳಗೊಂಡಿದೆ ಎಂದು ನಾಯ್ಡು ಹೇಳಿದ್ದಾರೆ.
ಕಳೆದ ಜನವರಿಯಲ್ಲಿ 10 ಲಕ್ಷಕ್ಕೂ ಅಧಿಕ ಜನಸಂಖ್ಯೆಯ 73 ನಗರಗಳ ಸಮೀಕ್ಷೆ ನಡೆಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.