ನವದೆಹಲಿ : ಸೌದಿಯಲ್ಲಿ ಉದ್ಯೋಗವನ್ನು ಕಳೆದುಕೊಂಡ 26 ಮಂದಿಯನ್ನೊಳಗೊಂಡ ಭಾರತೀಯರ ಮೊದಲ ತಂಡ ಗುರುವಾರ ನವದೆಹಲಿಗೆ ಆಗಮಿಸಿದೆ.
ಸರಕಾರ ಇವರುಗಳಿಗೆ ಎಕ್ಸಿಟ್ ವೀಸಾಗಳನ್ನು ನೀಡಿದ ಹಿನ್ನಲೆಯಲ್ಲಿ ಇವರು ಭಾರತಕ್ಕೆ ವಾಪಾಸಾಗಿದ್ದಾರೆ.
ಕಳೆದ ವಾರ ಗಲ್ಫ್ ದೇಶಕ್ಕೆ ಭೇಟಿ ಕೊಟ್ಟಿದ್ದ ವಿದೇಶಾಂಗ ಸಚಿವಾಲಯದ ರಾಜ್ಯ ಖಾತೆ ಸಚಿವ ಜನರಲ್ ವಿ. ಕೆ. ಸಿಂಗ್ ಅವರು ಸೌದಿ ಅರೇಬಿಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಉದ್ಯೋಗ ಕಳೆದುಕೊಂಡ ಸಾವಿರಾರು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಆಗಮಿಸುವಂತೆ ವ್ಯವಸ್ಥೆ ಮಾಡಿಕೊಡಬೇಕೆಂದು ಕೇಳಿಕೊಂಡಿದ್ದರು.
ಅವರ ಮಾತುಕತೆ ಫಲಪ್ರದವಾಗಿದ್ದು ಇದೀಗ ಭಾರತಕ್ಕೆ ಆಗಮಿಸುತ್ತಿರುವವರಿಗೆ ಫ್ರೀ ಪಾಸ್ ಸೌಲಭ್ಯವನ್ನು ನೀಡುತ್ತಿದೆ.
ಭಾರತಕ್ಕೆ ವಾಪಾಸ್ಸಾಗುತ್ತಿರುವವರ ಖರ್ಚು ವೆಚ್ಚವನ್ನು ನೋಡಿಕೊಳ್ಳುತ್ತಿರುವ ಸೌದಿ ಅರೇಬಿಯಾಗೆ ಭಾರತ ಧನ್ಯವಾದಗಳನ್ನು ಅರ್ಪಿಸಿದೆ.
ಆಗಸ್ಟ್ 2015 ರಿಂದ ಜುಲೈ 2016 ರ ನಡುವೆ ಒಟ್ಟು 55,730 ಮಂದಿ ಸೌದಿಯಿಂದ ಭಾರತಕ್ಕೆ ವಾಪಾಸ್ಸಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.