ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರವು ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ.
ರಾಷ್ಟ್ರದ ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರದ ಜನರ ವಿಶ್ವಾಸವನ್ನು ನಾವು ಗಳಿಸಿಕೊಳ್ಳಬೇಕು. ವಿದೇಶಾಂಗ ಸಚಿವಾಲಯವು ಜಗತ್ತಿನ ವಿವಿಧ ಭಾಗಗಳಲ್ಲಿ ವಾಸಿಸುವ ಪಿಒಕೆ ಅನಿವಾಸಿಗಳ ಸಂಪರ್ಕ ಸಾಧಿಸಿ, ಕಾಶ್ಮೀರದ ದಯನೀಯ ಸ್ಥಿತಿಯ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಬೇಕು. ಈ ಮಾಹಿತಿಗಳನ್ನು ಜಾಗತಿಕ ಸಮುದಾಯ ತಿಳಿಯುವಂತಾಗಬೇಕು. 80 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರವು ಜಮ್ಮು ಕಾಶ್ಮೀರ ರಾಜ್ಯದ ಅಭಿವೃದ್ಧಿಗೆ ಮೀಸಲಿರಿಸಿದೆ ಎಂದು ಮೋದಿಯವರು ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ.
ಸರ್ವಪಕ್ಷ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು ಮಾತನಾಡಿ, ಕಾಶ್ಮೀರದ ಜನರು ಶಾಂತಿಯನ್ನು ಬಯಸುತ್ತಿದ್ದಾರೆ. ಪಿಒಕೆ ಮತ್ತು ಬಲೂಚಿಸ್ಥಾನದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಪಾಕಿಸ್ಥಾನವು ಶೀಘ್ರದಲ್ಲೇ ಜಾಗತಿಕವಾಗಿ ಬಹಿರಂಗಪಡಿಸುವ ಕಾಲ ಬರಲಿದೆ.
ಎಲ್ಲಾ ಪಕ್ಷಗಳೂ ಕಾಶ್ಮೀರ ಕಣಿವೆಯ ವಿಷಯದಲ್ಲಿ ಸಮಾನಮನಸ್ಕರಾಗಿದ್ದಾರೆ. ಸದಸ್ಯರು ನೀಡಿರುವ ಎಲ್ಲಾ ಸಲಹೆಗಳನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಬಗ್ಗೆ ಮುಂದಿನ ಕ್ರಮಕೈಗೊಳ್ಳಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.