ಮಂಗಳೂರು : ಈ ಬಾರಿ ಶಿಕ್ಷಕರ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಸೆಪ್ಟೆಂಬರ್ 5 ರಂದೇ ಆಚರಿಸಲ್ಪಡುತ್ತಿರುವುದರಿಂದ, ಈ ರಾಜ್ಯದ ಬಹು ದೊಡ್ಡ ಸಮುದಾಯ ನಮ್ಮ ನಾಡಿನ ಅತ್ಯಂತ ಪ್ರಮುಖ ಹಬ್ಬಗಳಲ್ಲೊಂದಾದ ಗಣೇಶ ಚತುರ್ಥಿಯಂದು ಖಾಸಗಿ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅನಿವಾರ್ಯವಾಗಿದ್ದು, ನಮ್ಮ ರಾಜ್ಯದ ಶಿಕ್ಷಕ ಸಮುದಾಯ ಸ್ವಲ್ಪ ತೊಂದರೆಯನ್ನು ಅನುಭವಿಸುವಂತಾಗಿದೆ. ಇದರಿಂದಾಗಿ ಮನೆ ಮನೆಗಳಲ್ಲಿ ಪರಂಪರಾನುಗತವಾಗಿ ಆಚರಿಸುವ ಗಣೇಶ ಚತುರ್ಥಿ ಹಬ್ಬವನ್ನು ವಿಧಿವತ್ತಾಗಿ ಆಚರಿಸುವಲ್ಲಿ ಸಮಸ್ಯೆಗಳು ಉದ್ಭವಿಸಬಹುದು.
ಆದುದರಿಂದ ನಮ್ಮ ರಾಜ್ಯದ ಶಿಕ್ಷಕರಿಗೆ ತಮ್ಮ ಮನೆಗಳಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಅನುಕೂಲವಾಗುವಂತೆ ಶಿಕ್ಷಕರ ದಿನಾಚರಣೆಯನ್ನು 06 ಸೆಪ್ಟೆಂಬರ್ 2016 ರಂದು ಆಚರಿಸಲು ಸೂಕ್ತ ನಿರ್ಣಯವನ್ನು ಕೈಗೊಳ್ಳುವಂತೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನು ವಿನಂತಿಸಿದ್ದು, ಮಾನ್ಯ ಸಚಿವರು ಸಹಮತ ವ್ಯಕ್ತಪಡಿಸಿರುತ್ತಾರೆ. ಈಗಾಗಲೇ ಈ ಕುರಿತಾಗಿ ಮಾನ್ಯ ಸಚಿವರಿಗೆ ಪತ್ರ ಬರೆಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.