ಹೈದರಾಬಾದ್ : ರಿಯೋ ಒಲಿಂಪಿಕ್ಸ್ನಲ್ಲಿ ಅತ್ಯದ್ಭುತ ಸಾಧನೆ ಮಾಡಿ ಬೆಳ್ಳಿ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು, ಕುಸ್ತಿಯಲ್ಲಿ ಕಂಚು ಗೆದ್ದಿರುವ ಸಾಕ್ಷಿ ಮಲಿಕ್ ಮತ್ತು ಉತ್ತಮ ಪ್ರದರ್ಶನ ನೀಡಿದ ಜಿಮ್ನಾಸ್ಟಿಯನ್ ದೀಪಾ ಕರ್ಮಾಕರ್, ಬ್ಯಾಡ್ಮಿಂಟನ್ ಕೋಚ್ ಪಿ. ಗೋಪಿಚಂದ್ ಅವರಿಗೆ ಹೈದರಾಬಾದ್ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಹಾಗೂ ಉದ್ಯಮಿ ಚಾಮುಂಡೇಶ್ವರ್ನಾಥ್ ಅವರಿಂದ ಕೊಡಲ್ಪಟ್ಟ ಈ ಕೊಡುಗೆಯನ್ನು ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಅವರು ದುಬಾರಿ ಬಿಎಂಡಬ್ಲ್ಯು ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
ಭಾನುವಾರ ಹೈದರಾಬಾದ್ನ ಪುಲೆಲ್ಲಾ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ರಿಯೋ ಒಲಿಂಪಿಕ್ ಗುಡ್ವಿಲ್ ಅಂಬಾಸಿಡರ್ ಆಗಿರುವ ಸಚಿನ್ ಅವರು ಈ ಕ್ರೀಡಾಸಾಧಕರಿಗೆ ಕಾರುಗಳ ಕೀಗಳನ್ನು ಹಸ್ತಾಂತರಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಂಧು ಒಲಿಂಪಿಕ್ನಲ್ಲಿ ಪದಕ ಗೆದ್ದರೆ ಕಾರ್ ಗಿಫ್ಟ್ ನೀಡುವುದಾಗಿ ಈ ಹಿಂದೆಯೇ ಸಚಿನ್ ಹೇಳಿದ್ದರು. ಆ ಭರವಸೆಯನ್ನು ಅವರು ಇಂದು ಈಡೇರಿಸಿದ್ದಾರೆ ಎಂದಿದ್ದಾರೆ.
ರಿಯೋದಲ್ಲಿ ಭಾರತೀಯರ ಪ್ರದರ್ಶನದ ಬಗ್ಗೆ ಮಾತನಾಡಿದ ಗೋಪಿಚಂದ್, ಹೆಣ್ಣು ಮಕ್ಕಳನ್ನು ರಕ್ಷಿಸಿ ಎಂಬ ಘೋಷಣೆ ಇನ್ನು ಮುಂದೆ ಅಗತ್ಯವಿಲ್ಲ. ರಿಯೋದಲ್ಲಿ ಹೆಣ್ಣು ಮಕ್ಕಳೇ ನಮ್ಮನ್ನು ರಕ್ಷಿಸಿದ್ದಾರೆ ಎಂದಿದ್ದಾರೆ.
ಸಾಕ್ಷಿ ಮಲಿಕ್ ಅವರು 2020 ರ ಟೋಕಿಯೋ ಒಲಿಂಪಿಕ್ಸ್ನಲ್ಲಿ ತನ್ನ ಪದಕದ ಬಣ್ಣವನ್ನು ಬದಲಾಯಿಸುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.