ನವದೆಹಲಿ : ಕೇಂದ್ರದ ಮಹತ್ವಪೂರ್ಣ ಯೋಜನೆಗಳನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನಕ್ಕೆ ತಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಾಗರಿಕ ಸೇವಾ ಅಧಿಕಾರಿಗಳನ್ನು ಸನ್ಮಾನಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.
ವೈಯಕ್ತಿಕ ಸಚಿವಾಲಯವು ಸನ್ಮಾನಿಸುವ ಕಾರ್ಯಕ್ರಮಕ್ಕಾಗಿ ಪ್ರಧಾನ್ ಮಂತ್ರಿ ಕೃಷಿ ಸಿಂಚಯೀ ಯೋಜನಾ, ದೀನ್ ದಯಾಳ್ ಉಪಾಧ್ಯಾಯ ಗ್ರಾಮ್ ಜ್ಯೋತಿ ಯೋಜನಾ, ಪ್ರಧಾನ್ ಮಂತ್ರಿ ಫಸಲ್ ಬೀಮಾ ಯೋಜನಾ, ಸ್ಟಾರ್ಟ್ ಅಪ್ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ, ಇ-ನ್ಯಾಷನಲ್ ಅಗ್ರಿಕಲ್ಚರ್ ಮಾರ್ಕೆಟ್ ಯೋಜನೆಗಳನ್ನು ಪ್ರಮುಖವಾಗಿ ಆಯ್ದುಕೊಂಡಿದೆ.
ಈ ಯೋಜನೆಗಳನ್ನು ಅತಿ ಸಮರ್ಪಕ ರೀತಿಯಲ್ಲಿ ಅನುಷ್ಠಾನಕ್ಕೆ ತಂದ ಅಧಿಕಾರಿಗಳನ್ನು ಆಯ್ಕೆ ಮಾಡಿ ಅವರಿಗೆ ನಾಗರಿಕ ಸೇವಾ ದಿವಸವಾದ ಏಪ್ರಿಲ್ 21 ರಂದು ಪ್ರಧಾನಮಂತ್ರಿ ಅವರ ಅವಾರ್ಡ್ಗಳನ್ನು ಪ್ರದಾನ ಮಾಡಲಾಗುತ್ತದೆ.
ಅಲ್ಲದೆ ಪರಿಸರ ಸಂರಕ್ಷಣೆ, ವಿಪತ್ತು ನಿರ್ವಹಣೆ, ನೀರಿನ ಸಂರಕ್ಷಣೆ, ಇಂಧನ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಯೋಜನೆಗಳನ್ನು ಅತಿ ಸಮರ್ಪಕವಾಗಿ ಜಾರಿಗೊಳಿಸಲು ಪ್ರಯತ್ನಿಸಿದ ಸಂಘಟನೆ, ಕೇಂದ್ರ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳಿಗೆ, ಜಿಲ್ಲೆಗಳಿಗೂ ಕೂಡಾ ಈ ಅವಾರ್ಡ್ಗಳನ್ನು ನೀಡಲಾಗುತ್ತದೆ.
10 ಲಕ್ಷ ನಗದು ಪುರಸ್ಕಾರವನ್ನು ಈ ಪ್ರಶಸ್ತಿ ಒಳಗೊಂಡಿದೆ.
ಇಬ್ಬರು ಕೇಂದ್ರ ಸರ್ಕಾರದ ಉಪ ಕಾರ್ಯದರ್ಶಿಗಳ ಮಟ್ಟದ ಸಮಿತಿಯ ಇವುಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.