ವಿಯಂಟಿಯಾನ್: ಲಾವೋಸ್ ಪ್ರಧಾನಿ ಟಾಂಗ್ಲುನ್ ಸಿಸುಲಿತ್ ಜೊತ ದ್ವಿಪಕ್ಷೀಯ ಮಾತುಕತೆ ನಡೆಸಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಚೀನಾ ಸಮುದ್ರ ಹಂಚಿಕೆ ಸೇರಿದಂತೆ ಪ್ರದೇಶಿಕ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ.
ಏಷಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರು ಸಮುದ್ರ ಮಾರ್ಗಗಳು ‘ಜಾಗತಿಕ ವ್ಯಾಪಾರದ ಜೀವನಾಡಿಗಳಾಗಿವೆ. ಸಮುದ್ರಗಳ ಭದ್ರತೆ ಎಲ್ಲರ ಜವಾಬ್ದಾರಿಯಾಗಿದೆ. ಭಾರತ ಅಮೇರಿಕಾದ ಜಲನೀತಿ ಆಧಾರಿತ ನೌಕಾಯಾನ ಸ್ವಾತಂತ್ರ್ಯವನ್ನು ಬೆಂಬಲಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ವಿಶ್ವ ಸಂಸ್ಥೆಯ ವಿಸ್ತೃತ ಮತ್ತು ಸುಧಾರಿತ ಭದ್ರತಾ ಮಂಡಳಿಯ ಶಾಶ್ವತ ಸದಸ್ಯರಾಗಿ ಭಾರತವನ್ನು ತನ್ನ ದೇಶ ಬೆಂಬಲಿಸುತ್ತದೆ ಎಂದು ಲಾವೋಸ್ ಪ್ರಧಾನಿ ಸಿಸುಲಿತ್ ಹೇಳಿದ್ದಾರೆ.
ಎರಡೂ ದೇಶದ ನಾಯಕರು ರಾಜತಶಂತ್ರಿಕ ಸಂಬಂಧಗಳ ಸ್ಥಾಪನೆಯ ೬೦ನೇ ವಾರ್ಷಿಕೋತ್ಸವ ಆಚರಣೆಗೆ ಒಪ್ಪಿಗೆ ಸೂಚಿಸಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ, ಕೃಷಿ, ವಿಸದ್ಯುತ್ ಕ್ಷೇತ್ರದಲ್ಲಿ ಭಾರತದ ಬೆಂಬಲಕ್ಕೆ ಸಿಸುಲಿತ್ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಈಸ್ಟ್ ಏಷ್ಯಾ ಶೃಂಗಸಭೆಯ ಬಳಿಕ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರು, ಭಾರತ ಮತ್ತು ಅಮೇರಿಕಾ ನಡುವಿನ ಬೆಳೆಯುತ್ತಿರುವ ನಂಬಿಕೆಗೆ ಒಬಾಮಾ ಅವರ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಎಸ್ಟಿ ಸೇರಿದಂತೆ ಭಾರತದ ಆರ್ಥಿಕ ಸುಧಾರಣೆಯಲ್ಲಿ ಮೋದಿ ಅವರ ಯೋಜನೆಗಳ ಬಗ್ಗೆ ಒಬಾಮಾ ಕೂಡ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.