ಮಂಗಳೂರು : ಕಾವೇರಿ ನದಿ ನೀರು ಹಂಚಿಕೆ ಕುರಿತಾದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರ್ನಾಟಕದ ಜನತೆಗೆ ಆಘಾತವನ್ನುಂಟುಮಾಡಿದೆ. ನಾಡು ಬರ ಎದುರಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ಕುಡಿಯುವ ನೀರಿನ ಅವಶ್ಯಕತೆಯನ್ನು ಪರಿಗಣಿಸದೆ ತಮಿಳುನಾಡಿನ ಪರವಾಗಿ ನೀಡಿರುವ ತೀರ್ಪು (ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಬೇಕಾದ ಎಲ್ಲಾ ಗೌರವಗಳನ್ನು ಸಲ್ಲಿಸುತ್ತಾ) ದುರದೃಷ್ಟಕರ. ಒಕ್ಕೂಟ ವ್ಯವಸ್ಥೆಯ ಈ ಪ್ರಜಾಪ್ರಭುತ್ವದಲ್ಲಿ ರಾಜ್ಯಗಳ ನಡುವಿನ ಈ ರೀತಿಯ ಸಮಸ್ಯೆಗಳನ್ನು ಬಗೆಹರಿಸಲು ಕಾನೂನಿನ ಪ್ರವೇಶ ಪರಿಣಾಮಕಾರಿಯಾಗುವುದಿಲ್ಲ. ವಾಸ್ತವ ಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಮುಕ್ತ ಮಾತುಕತೆಯಿಂದ ಸಮಸ್ಯೆ ಬಗೆ ಹರಿದಿತೇ ವಿನಃ ವಸ್ತು ಸ್ಥಿತಿಗೆ ವಿರುದ್ಧವಾಗಿರುವ ನ್ಯಾಯಾಲಯದ ತೀರ್ಪು ಎರಡು ರಾಜ್ಯಗಳಲ್ಲಿ ಅಶಾಂತಿಗೆ ಕಾರಣವಾಗಿದೆ.
ಕರ್ನಾಟಕ ರಾಜ್ಯದ ಜನತೆಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಈ ವರ್ಷದ ಬರದ ಪರಿಸ್ಥಿತಿಯಿಂದಾಗಿ ಉದ್ಭವವಾಗುವ ಭೀಕರ ಸಮಸ್ಯೆಯನ್ನು ಎದುರಿಸಲು ತಮಿಳುನಾಡಿಗೆ ನೀರು ಬಿಡದಿರುವುದೇ ಉಳಿದಿರುವ ಒಂದೇ ಒಂದು ಮಾರ್ಗ. ಈ ಕುರಿತಾಗಿ ದಿಟ್ಟ ನಿರ್ಣಯವನ್ನು ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಹಾಗು ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆಗಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.