ವೆಲ್ಲೋರ್: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳಲ್ಲೊಬ್ಬನಾಗಿರುವ ಎ.ಜಿ. ಪೆರರಿವಲನ್ ಜೂನ್ 11, 1991ರಿಂದ ವೆಲ್ಲೋರ್ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದು, ಆತನ ಮೇಲೆ ಮಂಗಳವಾರ ದಾಳಿ ನಡೆದಿದೆ.
ಪೆರರಿವಲನ್ ಮೇಲೆ ಆತನ ಸಹ ಕೈದಿ ದಾಳಿ ನಡೆಸಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪೆರರಿವಲನ್ ಮೇಲಿನ ದಾಳಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ ಪೆರರಿವಲನ್ಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ವೈದ್ಯರು ಮತ್ತು ಜೈಲು ಅಧಿಕಾರಿಗಳು ಆತನ ಆರೈಕೆ ನಡೆಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಮಂದಿ ಅರಪಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ತಿರಸ್ಕರಿಸಿತ್ತು.
ಈ ಹಿಂದೆ ೨೦೧೪ರ ಯುಪಿಎ ಸರ್ಕಾರದ ಸಂದರ್ಭದಲ್ಲೂ ತಮಿಳುನಾಡು ಸರ್ಕಾರ ಅರಪಾಧಿಗಳಿಗೆ ಕ್ಷಮೆಯಾಚಿಸುವಂತೆ ಮನವಿ ಸಲ್ಲಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.