ವಿಶಾಖಪಟ್ಟಣಂ: ಕೇಂದ್ರದ ನಗರಾಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ಆಂಧ್ರ ಪ್ರದೇಶದ ಗುಂಟೂರ್ ಜಿಲ್ಲೆಯ ನೆರೆ ಪೀಡಿತ ಪ್ರದೇಶದಲ್ಲಿ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ವಿಜಯವಾಡದಿಂದ ಸಮೀಪದ ಜಿಲ್ಲೆಗಳಿಗೆ ತೆರಳಿದ ಅವರು, ನೆರೆ ಪೀಡಿತ ಪ್ರದೇಶಗಳ ಬೆಳೆ ಹಾನಿ, ಜನರ ಪರಿಸ್ಥಿತಿ, ರಸ್ತೆ ಮತ್ತು ರೈಲ್ವೆ ಸಂಚಾರ ಸ್ಥಗಿತಗೊಂಡ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.
ಇದೇ ವೇಳೆ ಇತ್ತೀಚೆಗೆ ಭಾರೀ ಮಳೆ ಮತ್ತು ಪ್ರವಾಹದಿಂದ ಸಂಭವಿಸಿದ ನಷ್ಟದ ಬಗ್ಗೆ ಗುಂಟೂರ್ನಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಸೆಪ್ಟೆಂಬರ್ 22ರಂದು ಸುರಿದ ಭಾರೀ ಮಳೆಗೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ 5 ಮಂದಿ ಸಾವನ್ನಪ್ಪಿದ್ದು, ವಿಶಾಖಪಟ್ಟಣದ 10000 ಕುಟುಂಬಗಳನ್ನು ಸುರಿಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ.
ಜಿಲ್ಲೆಯ ವಿವಿಧ ಗ್ರಾಮಗಳು ಮತ್ತು ಮಂಡಲಗಳು ಪ್ರವಾಹದಲ್ಲಿ ಮುಳುಗಡೆಯಾಗಿದ್ದು, ಜಿಲ್ಲೆಯ 33 ಮಂಡಲಗಳ 101 ಗ್ರಾಮಗಳಲ್ಲಿ 3,430 ಹೆಕ್ಟೇರ್ ಜಮೀನು ಹಾನಿಗೆ ಒಳಗಾಗಿದೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.