ನವದೆಹಲಿ: ಭಾರತ-ಪಾಕಿಸ್ತನದ ನಡುವೆ ಯುದ್ಧ ತಯಾರಿ ನಡೆಯುವ ಲಕ್ಷಣಗಳು ಕಂಡುಬರುತ್ತಿದ್ದು, ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಿಂದ 10 ಕಿ.ಮೀ. ಒಳಗಿರುವ ಪಂಜಾಬ್ನ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.
ಜೊತೆಗೆ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಹೆಚ್ಚುವರಿ ಪಡೆಗಳನ್ನು ಗಡಿಯಲ್ಲಿ ನಿಯೋಜಿಸಲಾಗಿದೆ ಎಂದು ಅದು ಹೇಳಿದೆ.
ಪಾಕ್ ಪ್ರದೇಶದಲ್ಲಿ ಭಾರತೀಯ ಸೇನೆ ಸಶಸ್ತ್ರ ದಾಳಿ ನಡೆಸಿದ್ದು, ಪಂಜಾಬ್ ಗಡಿಯಲ್ಲಿ ಸೇನೆಯ ನಿಯೋಜನೆ ಮತ್ತು ಜನರ ಸ್ಥಳಾಂತರ ಅಗತ್ಯವೆನಿಸಿದೆ. ಪಣಜಾಬ್ ಗಡಿಯಲ್ಲಿ ಗರಿಷ್ಟ ಮಟ್ಟದಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಸಲಹೆಗಾರ ಹರ್ಚರಣ ಬೈನ್ಸ್ ಹೇಳಿದ್ದಾರೆ.
ಜನರ ಸುರಕ್ಷತೆಗಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಾದಲ್ ಅವರ ನೇತೃತ್ವದಲ್ಲಿ ಗುರುವಾರ ಸಂಜೆ ಸಂಪುಟ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಪಂಜಾಬ್ ಗಡಿಯ ಗ್ರಾಮಸ್ಥರನ್ನು ಸ್ಥಳಾಂತರಿಸುವಂತೆ ಗೃಹ ಸಚಿವಾಲಯ ಪಂಜಾಬ್ ಸರ್ಕಾರಕ್ಕೆ ಸೂಚಿಸಿತ್ತು.
ಗುರುದ್ವಾರಾಗಳ ಧ್ವನಿವರ್ಧಕಗಳ ಸಹಾಯದಿಂದ ಗಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದ್ದು, ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಅಲ್ಲದೇ ಪಂಜಾಬ್ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ರದ್ದುಗೊಳಿಸಲಾಗಿದೆ.
ಪಂಜಾಬ್ ಪಾಕಿಸ್ಥಾನದ ಜೊತೆ 553 ಕಿ.ಮೀ. ಗಡಿಯನ್ನು ಹಂಚಿಕೊಂಡಿದೆ. ಇದನ್ನು ಬಿಎಸ್ಎಫ್ನ ಪ್ಯಾರಾ ಮಿಲಿಟರಿ ನಿಯಂತ್ರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.