ಮಂಗಳೂರು : ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದ.ಕ. ಜಿಲ್ಲಾ ಯುವ ಮೋರ್ಚಾ ವತಿಯಿಂದ 07-10-2016 ರಂದು ಪ್ರತಿಭಟನೆಯನ್ನು ನಡೆಸಲಾಯಿತು.
ಜಗತ್ತಿನ ಎಲ್ಲಾ ದೇಶಗಳು ಇತ್ತೀಚೆಗೆ ನಡೆದಂತಹ ಸರ್ಜಿಕಲ್ ಸ್ಟ್ರೈಕ್ ಘಟನೆಯ ಬಗ್ಗೆ ಸಹಮತ ವ್ಯಕ್ತಪಡಿಸಿ ಅಮೇರಿಕಾ, ರಷ್ಯಾ, ಚೀನಾದಂತಹ ದೇಶಗಳೇ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದು, ಇಂತಹ ಒಂದು ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಇಂತಹ ನೀಚ ಹೇಳಿಕೆ ಕೊಡುವ ಮೂಲಕ ಇಡೀ ದೇಶದ ಸೈನಿಕರಿಗೆ ಮತ್ತು ದೇಶದ ಜನತೆಗೆ ಅಪಮಾನ ಮಾಡಿದ್ದಾರೆ.
ಸೈನಿಕರ ನೈತಿಕ ಸ್ಥೈರ್ಯ ಕುಂದಿಸುವ ಈ ಹೇಳಿಕೆಯು ಅತೀ ಖಂಡನಾರ್ಹ ಮತ್ತು ರಾಹುಲ್ಗಾಂಧಿಯವರು ದೇಶದ ಸೈನಿಕರ ಮತ್ತು ದೇಶದ ಜನತೆಯ ಮುಂದೆ ಕ್ಷಮೆಯಾಚಿಸಬೇಕೆಂದು ಬಿಜೆಪಿ ದ.ಕ ಜಿಲ್ಲಾ ಯುವ ಮೋರ್ಚಾ ಆಗ್ರಹಿಸುತ್ತದೆ ಎಂದು ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜ ಹೇಳಿದರು.
ಪ್ರತಿಭಟನೆಯಲ್ಲಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಜಿಲ್ಲಾಧ್ಯಕ್ಷರಾದ ಹರೀಶ್ ಪೂಂಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ, ರಾಜ್ಯ ಉಪಾಧ್ಯಕ್ಷ ಶಿವರಂಜನ್ ಪುತ್ತೂರು, ರಾಜ್ಯಕಾರ್ಯಕಾರಿಣಿ ಸದಸ್ಯರುಗಳಾದ ಪೃಥ್ವಿರಾಜ್ ಬಂಗೇರ, ಮಹೇರ್ಶ, ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳದ ಸಂದೀಪ್ ಶೆಟ್ಟಿ ಮರವೂರು, ಯಶವಂತ ಬೆಳಾಲು, ಕಿಶೋರ್ ಬಾಬು, ಸುದರ್ಶನ್, ಮಹೇಶ್ ಜೆಂಕ್ಯಾರು, ಶಶಾಂಕ್ ಆಚಾರ್, ಸೂರಜ್, ಮಂಡಲ ಅಧ್ಯಕ್ಷರುಗಳಾದ ಸಂದೀಪ್ ಶೆಟ್ಟಿ, ಅಭಿಲಾಷ್ ಶೆಟ್ಟಿ, ಸಂಪತ್, ಯಶ್ಪಾಲ್ ಸುವರ್ಣ, ಸುಜಿತ್ ಮಾಡೂರು, ಸುನೀಲ್, ಅನೀಶ್ ಇನ್ನಿತರರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.