ನವದೆಹಲಿ: ಸಾಮಾಜಿಕ ಮಾಧ್ಯಮಗಳ ಈ ಯುಗದಲ್ಲಿ ಸಾರ್ವಜನಿಕರಿಂದ ಮಾಹಿತಿಗಳನ್ನು ಮರೆಮಾಚಲು ಸಾಧ್ಯವಿಲ್ಲ. ಅಲ್ಲದೇ ಸರ್ಕಾರಿ ಸಂಸ್ಥೆಗಳಿಂದ ಅಧಿಕೃತ ಮಾಹಿತಿಗಳ ಅನುಪಸ್ಥಿತಿಯಲ್ಲಿ ಜನರು ಅನಗತ್ಯ ಮಾಹಿತಿಗಳಿಗೆ ದುರುದ್ದೇಶಪೂರ್ವಕವಾಗಿ ಬಲಿಯಾಗುತ್ತಿದ್ದಾರೆ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರಗಳ ರಾಜ್ಯ ಸಚಿವ ರಾಜ್ಯವರ್ಧನ್ ರಾಠೋರ್ ಹೇಳಿದ್ದಾರೆ.
ಈ ದಿನಗಳಲ್ಲಿ ಸರ್ಕಾರ ವಾಸ್ತವಿಕ ಮಾಹಿತಿಗಳನ್ನು ಮುಚ್ಚುವಂತಿಲ್ಲ, ಸರ್ಕಾರಿ ಸಂಸ್ಥೆಗಳು ಎಲ್ಲ ವಾಸ್ತವ ಮಾಹಿತಿಗಳನ್ನು ಸಾರ್ವಜನಿಕಗೊಳಿಸಲೇಬೇಕು. ಟ್ವಿಟರ್ನಂತಹ ಸಾಮಾಜಿಕ ಮಾಧ್ಯಗಳನ್ನು ಬಳಸಿ, ವೇಗವದ ಗತಿಯಲ್ಲಿ, ಚುರುಕಾಗಿ ಮಾಹಿತಿಗಳನ್ನು ಹಂಚಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಸರ್ಕಾರಿ ಸಚಿವಾಲಯಗಳು ಮತ್ತು ಇಲಾಖೆಗಳಿಂದ ಸಾಮಾಜಿಕ ಮಾಧ್ಯಗಳಲ್ಲಿ ಉಪಸ್ಥಿತಿ ಹೆಚ್ಚಿದ್ದು, ಕೇಂದ್ರ ಸರ್ಕಾರ ಪ್ರಜ್ಞಾಪೂರ್ವಕವಾಗಿ ಪಾದರ್ಶಕತೆ ಅನುಸರಿಸಲು ಪ್ರೋತ್ಸಾಹಿಸುತ್ತಿದೆ. ಕಳೆದ ಕೆಲವಿ ತಿಂಗಳುಗಳಿಂದ ಸಾಮಾಜಿಕ ಮಾಧ್ಯಗಳ ಬಳಕೆಗೆ ಅಧಿಕಾರಿಗೆ ತರಬೇತಿ ನೀಡಲು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ ಎಂದು ಸಚಿವ ರಾಠೋರ್ ಹೇಳಿದ್ದಾರೆ.
ಹಲವು ಸುದ್ದಿ ಮಾಧ್ಯಮಗಳು ಸಾಮಾಜಿಕ ಮಾಧ್ಯಗಳಾದ ಫೇಸ್ಬುಕ್, ಟ್ವಿಟರ್ಗಳಲ್ಲಿ ಸುದ್ದಿಗಳ ಪ್ರಭಾವ, ಪ್ರಚಾರ ಟ್ರೆಂಡ್ ಆಗಿಸಿದ್ದು, ಯಾವ ಸುದ್ದಿಗಳನ್ನು ಹಾಕಬೇಕು, ಬಿಡಬೇಕು ಎಂದು ನಿರ್ಧರಿಸುವಲ್ಲಿ ಗೊಂದಲ ವ್ಯಕ್ತವಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.