ನವದೆಹಲಿ: ಉರಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಆನ್ಲೈನ್ ಅರ್ಜಿ ಈಗ ವೈರಲ್ ಆಗಿದೆ.
ಪುಣೆ ಮೂಲದ ಮರ್ಯಾದಾ ಪ್ರಸಾದ್ change.org, ಆನ್ಲೈನ್ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಇದಕ್ಕೆ 81,611 ಜನರ ಬೆಂಬಲದೊಂದಿಗೆ ಸಹಿ ಪಡೆಯಲಾಗಿದೆ.
ಈ ಆನ್ಲೈನ್ ಅರ್ಜಿಗೆ ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ, ಅರ್ಜಿಯನ್ನು ಪರಿಗಣಿಸಿ ಹುತಾತ್ಮ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಬಗ್ಗೆ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಲ್ಲಿ ಕೋರಲಾಗಿದೆ. ಶೀಘ್ರದಲ್ಲೇ ರಾಜ್ಯ ಸರ್ಕಾರಗಳಿಗೂ ಈ ವಿಚಾರವಾಗಿ ಪತ್ರ ಬರೆಯಲಾಗುವುದು ಎಂದು ಅವರು ಹೇಳಿದ್ದಾರೆ.
ನಮ್ಮ ಸೈನಿಕರು ಸರ್ವೋಚ್ಚ ತ್ಯಾಗವನ್ನು ಮಾಡಿದ್ದಾರೆ. ಅವರ ತ್ಯಾಗ ಅಮೂಲ್ಯವಾದದ್ದು. ಅವರ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಭರಿಸುವುದು ಒಂದು ಸಣ್ಣ ಕೃತಜ್ಞತೆಯ ಭಾಗವಾಗಲಿದೆ. ಒಂದು ಬಾರಿ ಪರಿಹಾರ ಒದಗಿಸುವುದು ಅವರಿಗೆ ಅವಮಾನಿಸಿದಂತಾಗುತ್ತದೆ. ತಮ್ಮ ಕನಸು ನನಸಾಗಿಸಲು ಮಕ್ಕಳು ನಿರಂತರ ಬೆಂಬಲವನ್ನು ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.