ನವದೆಹಲಿ: ಭಾರತ ಮತ್ತು ಹಂಗೇರಿ ನಡುವೆ ನೀರು ನಿರ್ವಹಣೆ ಸಹಕಾರ ಒಪ್ಪಂದಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಭಾರತದ ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಸಚಿವಾಲಯ ಮತ್ತು ಗಂಗಾ ಪುನರ್ಸ್ಥಾಪನೆ, ಭಾರತ ಸರ್ಕಾರದ ಹಾಗೂ ಹಂಗೇರಿಯ ಆಂತರಿಕ ಸಚಿವಾಲಯ ಒಪ್ಪಂದಕ್ಕೆ ಸಹಿ ಹಾಕಲಿವೆ.
ಈ ಒಪ್ಪಂದ ಎರಡೂ ರಾಷ್ಟ್ರಗಳ ನಡುವೆ ನೀರು ನಿರ್ವಹಣೆ ಕ್ಷೇತ್ರದಲ್ಲಿ ಸಮಾನತೆ ಮತ್ತು ಪರಸ್ಪರ ಪ್ರಯೋಜನಗಳ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲಿದೆ. ನೀರು ನಿರ್ವಹಣೆಯಲ್ಲಿ ತೊಡಗಿರುವ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಇದು ಪ್ರಯೋಜನವಾಗಲಿದೆ.
ಇದೇ ವೇಳೆ ಸಚಿವ ಸಂಪುಟ ಎಪ್ರಿಲ್ 1999ರಲ್ಲಿ ಸಹಿ ಹಾಕಲಾಗಿದ್ದ ಒಪ್ಪಂದ ಹಾಗೂ ಕತಾರ್ ಜೊತೆ ಯುವ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಜೂನ್ನಲ್ಲಿ ಸಹಿ ಹಾಕಲಾದ ಮೊದಲ ಕಾರ್ಯನಿರ್ವಾಹಕ ಪ್ರೋಗ್ರಾಂನ್ನು ಮತ್ತೆ ಕೈಗೆತ್ತಿಕೊಂಡಿದೆ.
ಈ ಒಪ್ಪಂದ ಕ್ರೀಡಾ ವಿಜ್ಞಾನ, ಕ್ರೀಡಾ ಔಷಧ ಮತ್ತು ತರಬೇತಿ ತಂತ್ರಗಳ ಕ್ಷೇತ್ರದಲ್ಲಿ ಪರಿಣತಿ ಪಡೆಯಲು ಮತ್ತು ಅಂತಾರಾಷ್ಟ್ರೀಯ ಕ್ಷೇತ್ರದಲ್ಲಿ ಕ್ರೀಡಾಪಟುಗಳ ಕ್ರೀಡಾ ಸಾಮರ್ಥ್ಯ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.