ಸಿರ್ಮೋರ್: ಮುಂಬರುವ 2020ರ ಒಳಗೆ ಭಾರತವನ್ನು ಬಹಿರ್ದೆಸೆ ಮುಕ್ತ ರಾಷ್ಟ್ರವನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದಿಂದ ಪ್ರೇರಿತನಾದ ಇಂಡೋ-ಟಿಬೆಟ್ ಗಡಿ ಪೊಲೀಸ್ನ ಸೈನಿಕರೊಬ್ಬರು ತಮ್ಮ ಗ್ರಾಮವನ್ನು ಬಹಿರ್ದೆಸೆ ಮುಕ್ತಗೊಳಿಸಲು ಶೌಚಾಲಯ ನಿರ್ಮಾಣಕ್ಕಾಗಿ 57 ಸಾವಿರ ದಾನ ನೀಡಲು ನಿರ್ಧರಿಸಿದ್ದಾರೆ.
ಹಿಮಾಚಲ ಪ್ರದೇಶದ ಸಿರ್ಮೋರ್ ಗ್ರಾಮದ ವಿಕಾಸ್ ಠಾಕೂರ್ ಐಟಿಬಿಪಿ 1994ರ 23ನೇ ಬೆಟಾಲಿಯನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಗ್ರಾಮ ಪಂಚಾಯಯತ್ ಸಭೆ ವೇಳೆ ಪಚಾಯತ್ ಮುಖ್ಯಸ್ಥರು ಗ್ರಾಮಸ್ಥರಲ್ಲಿ ಡಿಸೆಂಬರ್ ತಿಂಗಳ ಒಳಗಾಗಿ ಶೌಚಾಲಯಗಳನ್ನು ನಿರ್ಮಿಸುವಂತೆ ಆದೇಶಿಸಿದ್ದಾರೆ. ಈ ವೇಳೆ ದಿಗ್ಭ್ರಮೆಗೊಂಡ ಗ್ರಾಮಸ್ಥರು ಶೌಚಾಲಯ ನಿರ್ಮಾಣಕ್ಕೆ ಹಣವಿಲ್ಲ ಎಂದು ಹೇಳಿದ್ದಾರೆ. ಇದನ್ನು ಗಮನಿಸಿದ ವಿಕಾಸ್ ಠಾಕೂರ್, ಶೌಚಾಲಯ ನಿರ್ಮಾಣಕ್ಕೆ 57 ಸಾವಿರ ದಾನ ನೀಡಲು ನಿರ್ಧರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ತನ್ನನ್ನು ಮತ್ತು ತನ್ನ ಗ್ರಾಮವನ್ನು ಪ್ರಶಂಸಿಸಿದ್ದು, ಇದನ್ನು ಎಂದಿಗೂ ಮರೆಯುವುದಿಲ್ಲ ಎಂದು ಠಾಕೂರ್ ಹೇಳಿದ್ದಾರೆ.
ಠಾಕೂರ್ ಅವರ ಈ ನಿರ್ಧಾರದಿಂದ ಪ್ರೇರಿತರಾದ ಇತರ ಸಹೋದ್ಯೋಗಗಿಗಳು ಹಾಗೂ ಇತರ ಅರೆ ಸೈನಿಕ ದಳ ಸಿಬ್ಬಂದಿಗಳು ಕೂಡ ತಮ್ಮ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ದಾನ ನೀಡಲು ನಿರ್ಧರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.