ನವದೆಹಲಿ: ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ನಡೆಸುವುದರ ಬಗ್ಗೆ ಸಾರ್ವಜನಿಕ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ದೀಪಾವಳಿ ಮಂಗಲ ಮಿಲನ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೆಲವು ವಿಚಾರಗಳ ಮೇಲಿನ ಚರ್ಚೆಗಳು ಸ್ಥಗಿತಗೊಂಡಿವೆ. ಮಾಧ್ಯಮಗಳು ಇಂತಹ ಚರ್ಚೆಗಳನ್ನು ಮುನ್ನಡೆಸುವ ತಮ್ಮ ಪಾತ್ರವನ್ನು ನಿರ್ವಹಿಸಿದರೆ ಉತ್ತಮ ಎಂದು ಹೇಳಿದ್ದಾರೆ.
ಬಹುತೇಕ ಎಲ್ಲ ರಾಜಕೀಯ ನಾಯಕರು ಹಲವು ಬಾರಿ ಈ ವಿಚಾರಗಳಿಗೆ ಏನಾದರೂ ಉಪಾಯ ಕಂಡುಹಿಡಿಯುವ ಬಗ್ಗೆ ಖಾಸಗಿಯಾಗಿ ಮಾತನಾಡುತ್ತಾರೆ. ಆದರೆ ಈ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸಲು ಹೇಳಿದಲ್ಲಿ ಮಾತನಾಡಲು ಹಿಂಜರಿಯುತ್ತಾರೆ. ಇಂತಹ ಅಡೆತಡೆಗಳು ಕೆಲವು ಬಾರಿ ಮೇಲುಗೈ ಸಾಧಿಸಬಹುದು. ಆದರೆ ಈ ಚರ್ಚೆಗಳು ಸಾರ್ವಜನಿಕವಾಗಿ ನಡೆಯುವುದು ಅಗತ್ಯ ಎಂದು ಅವರು ಹೇಳಿದ್ದಾರೆ.
ಇದು ಸರ್ಕಾರ ವಿಧಿಸಿದ ವಿಚಾರವಲ್ಲ. ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳು ದೊಡ್ಡ ಸಂಖ್ಯೆಯಲ್ಲಿ ಚರ್ಚೆಗಳಲ್ಲಿ ಭಾಗವಹಿಸುವಂತೆ ಮೋದಿ ಅವರು ಸಲಹೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.