ಲಖ್ನೌ: ಉತ್ತರ ಪ್ರದೇಶದ 2017ರ ವಿಧಾನಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಲಖ್ನೌದಲ್ಲಿ ನವೆಂಬರ್ 5ರಿಂದ ಪರಿವರ್ತನ್ ಯಾತ್ರೆ ಆರಂಭಿಸಲಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸಹರನ್ಪುರದಲ್ಲಿ ಮೊದಲ ‘ಪರಿವರ್ತನ್ ಯಾತ್ರೆಗೆ ಹಸಿರು ನಿಶಾನೆ ನೀಡಲಿದ್ದಾರೆ.
ಪ್ರಚಾರ ರ್ಯಾಲಿ 5 ದಿನಗಳ ಕಾಲ ನಡೆಯಲಿದ್ದು, ಸಹರನ್ಪುರ ಬಳಿಕ ಲಲಿತ್ಪುರ, ಬಾಲ್ಲಿಯಾ, ಸೋನ್ಭದ್ರಾಗಳಲ್ಲಿ ನಡೆಯಲಿದೆ.
ಪ್ರಧಾನಿ ಮೋದಿ ಅವರು ವಿವಿಧ ಕಡೆಗಳಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ಈ ವೇಳೆ ಗೃಹ ಸಚಿವ ರಾಜ್ನಾಥ್ ಸಿಂಗ್, ಕಲ್ರಾಜ್ ಮಿಶ್ರಾ ಮತ್ತಿತರರು ಉಪಸ್ಥಿತರಿರುವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.