ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡತ್ತಿದೆ. ಈ ಘಟನೆಯ ಹಿಂದೆ ಹಲವು ಅನುಮಾನಗಳು ಮತ್ತು ರಾಜಕೀಯವನ್ನು ಕಾಣುತ್ತಿರುವುದಾಗಿ ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಹೇಳಿದ್ದಾರೆ.
ಒಆರ್ಒಪಿ ವಿಚಾರದಲ್ಲಿ ರಾಮ್ ಕಿಶನ್ ಗ್ರೆವಾಲ್ ಆತ್ಮಹತ್ಯೆ ಘಟನೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಪಾತ್ರವನ್ನು ಉಲ್ಲೇಖಿಸಿದ ಮೀನಾಕ್ಷಿ ಲೇಖಿ, ಒಆರ್ಒಪಿಯ ರಾಜಕೀಯದಲ್ಲಿ ಹೊರಹೊಮ್ಮಿರುವ ಎರಡು ಪ್ರಮುಖ ಮುಖಗಳೆಂದರೆ ರಾಹುಲ್ ಗಾಂಧಿ ಮತ್ತು ಪ್ರಿಯಂಕಾ ಗಾಂಧಿ. ಕಾಂಗ್ರೆಸ್ ಪಕ್ಷದ ಪ್ರಕಾರ ಒಆರ್ಒಪಿ ಪದದ ಅರ್ಥ’ಒನ್ ರಾಹುಲ್, ಒನ್ ಪ್ರಿಯಂಕಾ’ ಆಗಿದೆ ಎಂದು ಅವರು ಹೇಳಿದ್ದಾರೆ.
ಒಆರ್ಒಪಿ ವಿಚಾರದಲ್ಲಿ ನಿವೃತ್ತ ಯೋಧ ರಾಮ್ ಕಿಶನ್ ಗ್ರೇವಾಲ್ ಆತ್ಮಹತ್ಯೆಗೆ ಒಳಗಾಗಿದ್ದರು.
ನಿವೃತ್ತ ಯೋಧ ರಾಮ್ ಕಿಶನ್ ಗ್ರೇವಾಲ್ 4,000 ರೂ. ಪಿಂಚಣಿ ಪಡೆಯುತ್ತಿದ್ದ ಸಂದರ್ಭ ಆತ್ಮಹತ್ಯೆಗೆ ಯತ್ನಿಸಿರಲಿಲ್ಲ. ಅದೇ ಅವರು 24,000 ರೂ. ಪಿಂಚಣಿ ಪಡೆಯುತ್ತಿರುವಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ದರಿಂದ ಆತ್ಮಹತ್ಯೆಯ ಕಾರಣ ಮತ್ತು ಆತ್ಮಹತ್ಯೆಯ ಸಂದರ್ಭದ ಹಿನ್ನೆಲೆಯ ನಡುವೆ ಯಾವುದೇ ತಾರ್ಕಿಕ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.