ನವದೆಹಲಿ: ಭಾರತೀಯ ಮೀನುಗಾರರನ್ನು ಗಾಳ ಹಾಕುವುದು, ಬಂಧಿತ ಭಾರತೀಯ ಮೀನುಗಾರರ ಬಿಡುಗಡೆ ಮತ್ತು ಜಂಟಿ ಗಸ್ತು ಕಾರ್ಯಾಚರಣೆಗೆ ಭಾರತ ಮತ್ತು ಶ್ರೀಲಂಕಾ ಒಪ್ಪಿಕೊಂಡಿವೆ.
ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಶ್ರೀಲಂಕಾದ ವಿದೇಶಾಂಗ ಸಚಿವ ಮಂಗಳ ಸಮರವೀರ ಉಪಸ್ಥಿತಿಯಲ್ಲಿ ಸಹಿ ಹಾಕಲಾಗಿದ್ದು, ಜಂಟಿ ಕಾರ್ಯಾಚರಣೆ ತಂಡ ರಚಿಸಲಾಗುವುದು. ಮೀನುಗಾರರ ಸಮಸ್ಯೆ ಬಗ್ಗೆ ಎರಡೂ ದೇಶದ ಸಚಿವರು ಆಗಾಗ ಸಭೆ ನಡೆಸಲಿದ್ದಾರೆ. ಇದರ ಮೊದಲ ಸಭೆ ಜನವರಿ ೨, ೨೦೧೭ರಂದು ನಡೆಯಲಿದೆ ಎಂದು ಜಂಟಿ ಪ್ರಕಟಣೆ ತಿಳಿಸಿದೆ.
ಜಂಟಿ ಕಾರ್ಯಾಚರಣೆ ತಂವು ಎರಡೂ ದೇಶಗಳ ವಿದೇಶಾಂಗ ಸಚಿವಾಲಯದ ಪ್ರತಿನಿಧಿಗಳು, ಕರಾವಳಿ ಕಾವಲು ಪಡೆ ಮತ್ತು ನೌಕಾಸೇನೆಯನ್ನು ಒಳಗೊಂಡಿದೆ.
ಮೀನುಗಾರರ ಸಂಘಗಳು 6 ತಿಂಗಳಿಗೊಮ್ಮೆ ಸಭೆ ನಡೆಸಲು ಸೂಚಿಸಲಾಗಿದ್ದು, ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆಯಿಂದ ಮೀನುಗಾರರ ರ್ನಿಹಣೆ ಸಂದರ್ಭ ಜೀವಹಾನಿ ಸಂಭಿಸದಂತೆ ಒಪ್ಪಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.