ನವದೆಹಲಿ: ದೆಹಲಿ, ಎನ್ಸಿಆರ್ ಮತ್ತು ಉತ್ತರಪ್ರದೇಶಗಳಲ್ಲಿ ಉಪ್ಪು ಕೊರತೆಯ ಬಗ್ಗೆ ವದಂತಿಗಳು ಕೇಳಿ ಬರುತ್ತಿದ್ದು, ಅಂತಹ ಯಾವುದೇ ಕೊರತೆ ಸಂಭವಿಸಿಲ್ಲ ಎಂದು ಕೇಂದ್ರ ಮತ್ತು ದೆಹಲಿ ಸರ್ಕಾರಗಳು ಸ್ಪಷ್ಟಪಡಿಸಿವೆ.
ಯಾವುದೇ ರೀತಿಯ ಉಪ್ಪಿನ ಕೊರತೆ ಸಂಭವಿಸಿಲ್ಲ. ರಾಜ್ಯ ಸರ್ಕಾರ ನ್ಯಾಯ ಬೆಲೆಗೆ ಉಪ್ಪಿನ ಲಭ್ಯತೆ ಬಗ್ಗೆ ಖಚಿತಪಡಿಸುವ ಅಧಿಕಾರ ಹೊಂದಿದೆ ಎಂದು ಕೇಂದ್ರ ಸರ್ಕಾರದ ವಕ್ತಾರ ತಿಳಿಸಿದ್ದಾರೆ.
ದೆಹಲಿ, ಎನ್ಸಿಆರ್ಗಳಲ್ಲಿ ಉಪ್ಪಿನ ಬೆಲೆ ರೂ. 450 ಮತ್ತು ಉತ್ತರ ಪ್ರದೇಶದಲ್ಲಿ ರೂ. 400 ತಲುಪಿದೆ ಎಂಬ ಊಹೆಗಳು ವ್ಯಾಪಕವಾಗಿ ಹರಡಿತ್ತು. ಇದು ಜನರನ್ನು ಗೊಂದಲಕ್ಕೆ ಸಿಲುಕಿಸಿದೆ.
ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ 22 ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಿಸುತ್ತದೆ. ದೇಶದಾದ್ಯಂತ ಬೆಲೆಗಳ ವರದಿಯನ್ನು ಕೇಂದ್ರ ಸಲ್ಲಿಸಿದ್ದು, ಉಪ್ಪು ಅಥವಾ ಇತರ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿಲ್ಲ ಎಂದು ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.