ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರೂ.500 ಮತ್ತು 1000 ಮಖಬಲೆಯ ನೋಟುಗಳ ರದ್ದತಿ ಬಗ್ಗೆ ಭಾನುವಾರ ರಾತ್ರಿ ವಿಶೇಷ ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಬ್ಯಾಂಕ್ಗಳಲ್ಲಿ ಹೊಸ ನೋಟುಗಳ ಪೂರೈಕೆ ಮತ್ತು ಲಭ್ಯತೆ ಬಗ್ಗೆ ಪ್ರಧಾನಿ ಮೋದಿ ಅವರು ಪರಿಶೀಲನೆ ನಡೆಸಿದ್ದಾರೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಬ್ಯಾಂಕುಗಳ ನಗದು ಹಿಡುವಳಿ ಮಿತಿಯನ್ನು 50,000ಕ್ಕೆ ಹೆಚ್ಚಿಸಲು ಸೂಚಿಸಲಾಗಿದೆ ಎಂದು ದಾಸ್ ಹೇಳಿದ್ದಾರೆ.
ಶೀಘ್ರದಲ್ಲೇ ಹೊಸ ರೂ.500, 2000 ಮುಖಬೆಲೆಯ ನೋಟುಗಳನ್ನು ಎಟಿಎಂಗಳಲ್ಲಿ ದೊರಕುವಂತೆ ಕ್ರಮ ಕೈಗೊಳ್ಳಲಾಗಿದೆ.
ಈಗಾಗಲೇ ರದ್ದುಗೊಂಡಿರುವ ರೂ.500 ಮತ್ತು 1000 ಮುಖಬೆಲೆಯ ನೋಟುಗಳ ಬದಲಾವಣೆ ಮಿತಿಯನ್ನು ರೂ.4000ರಿಂದ 4,5000ಕ್ಕೆ ಹೆಚ್ಚಿಸಲಾಗಿದೆ. ಎಟಿಎಂಗಳಿಂದ ಪಡೆಯಬಹುದಾದ ಹಣದ ಮಿತಿಯನ್ನು ರೂ.2000 ದಿಂದ 2,500ಕ್ಕೆ ಏರಿಸಲಾಗಿದೆ.
ಬ್ಯಾಂಕ್ ಕೌಂಟರ್ಗಳಿಂದ ಸಾಪ್ತಾಹಿಕ ಹಿಂಪಡೆಯಬಹುದಾದ ರೂ.20,000 ಮೊತ್ತವನ್ನು ರೂ.24,000ಕ್ಕೆ ಹೆಚ್ಚಿಸಲು ಚರ್ಚೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಪ್ರತಿ ನಿತ್ಯ ಗರಿಷ್ಟ ರೂ.10,000 ಹಿಂಪಡೆಯುವ ನಿಯಮವನ್ನು ಹಿಂಪಡೆಯಲಾಗಿದೆ.
ರದ್ದುಗೊಂಡಿರುವ ರೂ.500 ಮತ್ತು 1000 ಮುಖಬೆಲೆಯ ನೋಟುಗಳನ್ನು ಸರ್ಕಾರಿ ಆಸ್ಪತ್ರೆ, ಪೆಟ್ರೋಲ್ ಬಂಕ್, ಟೋಲ್ ಬೂತ್ಗಳಲ್ಲಿ ನ.24ರ ವರೆಗೆ ಸ್ವೀಕರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.
ಗ್ರಾಮೀಣ ಪ್ರದೇಶದಲ್ಲಿ ಕೂಡ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಮೂಲಕ ಹಣ ಪಡೆಯಲು ಎಟಿಎಂಗಳನ್ನು ನಿಯೋಜಿಸಲಾಗಿದೆ. ಕಳೆದ 3 ತಿಂಗಳಿನಿಂದ ಚಾಲ್ತಿಯಲ್ಲಿರುವ ಕರೆಂಟ್ ಅಕೌಂಟ್ ಹೊಂದಿರುವ ವ್ಯಾಪಾರ ಘಟಕಗಳು ಏಕಕಾಲದಲ್ಲಿ ರೂ.50,000 ನಗದು ಡ್ರಾ ಮಾಡಲು ಅನುಮತಿಸಲಾಗಿದೆ ಎಂದು ದಾಸ್ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ರಾಜ್ನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು, ವಿದ್ಯುತ್, ಗಣಿ ಮತ್ತು ಕಲ್ಲಿದ್ದಲು ಸಚಿವ ಪಿಯುಶ್ ಗೋಯಲ್ ಹಾಗೂ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.