ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತ್ರಿಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಬುಧವಾರ ದೆಹಲಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಿದ್ದು, ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಈ ರ್ಯಾಲಿಯಲ್ಲಿ ಟಿಎಂಸಿ ಪಕ್ಷದ ಜೊತೆ ಕೈಜೋಡಿಸಲು ಮುಂದಾಗಿದೆ.
ನೋಟು ನಿಷೇಧದ ನಿರ್ಧಾರವನ್ನು ಹಿಂಪಡೆಯುವಂತೆ ಟಿಎಂಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಮನವಿ ಸಲ್ಲಿಸಲಿದ್ದು, ಶಿವಸೇನೆ ಅಲ್ಲದೇ ಮಿತ್ರ ಪಕ್ಷಗಳಾದ ಆರ್ಜೆಡಿ, ಎನ್ಸಿ ಮತ್ತು ಜೆಡಿಯು ಪಕ್ಷಗಳು ರ್ಯಾಲಿಗೆ ಬೆಂಬಲ ಸೂಚಿಸಿವೆ.
ಸಂಸತ್ ಅಧಿವೇಶನ ಬುಧವಾರ ಾರಂಭಗೊಳ್ಳಲಿದ್ದು, ಪ್ರಮುಖ ವಿಪಕ್ಷ ಕಾಂಗ್ರೆಸ್ ಈ ರ್ಯಾಲಿಯಿಂದ ಹಿಂದೆ ಸರಿದಿದೆ. ಅದು ಸಂಸತ್ನಲ್ಲಿ ಈ ವಿಚಾರವನ್ನು ಉಭಯ ಸದನಗಳಲ್ಲಿ ಪ್ರಶ್ನಿಸಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರದಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸರ್ಕಾರವನ್ನು ಟೀಕಿಸಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ, ಟಿಎಂಸಿ ರ್ಯಾಲಿಗೆ ಬೆಂಬಲ ಸೂಚಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಶಿವಸೇನೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಲಿದೆ. ಇದು ಆಡಳಿತ ಅಥವಾ ವಿಪಕ್ಷಗಳ ವಿಚಾರವಲ್ಲ. ಇದು ಜನರು ಎದುರಿಸುತ್ತಿರುವ ಸಮಸ್ಯೆಯ ವಿಚಾರವಾಗಿದೆ ಎಂದು ಪಕ್ಷದ ನಾಯಕ ಸಂಜಯ್ ರಾವತ್ ಹೇಳೀದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.