ನವದೆಹಲಿ: ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಕೇಂದ್ರ ಸರ್ಕಾರದ ನೋಟು ನಿಷೇಧ ನಡೆಯನ್ನು ಪಾಕಿಸ್ಥಾನದ ಉಗ್ರ ದಾಳಿಗೆ ಹೋಲಿಸಿ ನೀಡಿದ ಹೇಳಿಕೆಯನ್ನು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ತೀವ್ರವಾಗಿ ಖಂಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ನೋಟು ನಿಷೇಧವನ್ನು ಪಾಕ್ ಉಗ್ರ ದಾಳಿಗೆ ಹೋಲಿಕೆ ಮಾಡುವ ಮೂಲಕ ದೇಶವನ್ನು ಅವಮಾನ ಮಾಡುತ್ತಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ನಾಯ್ಡು ಹೇಳಿದ್ದಾರೆ.
ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದಾಗಿ ದೇಶದಲ್ಲಿ ಮೃತಪಟ್ಟ ಜನರ ಅರ್ಧದಷ್ಟೂ ಜನ ಉರಿಯ ಪಾಕ್ ಉಗ್ರ ದಾಳಿಯಲ್ಲಿ ಮೃತಪಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಅವರು ಕೇಂದ್ರ ಸರ್ಕಾರ ಮುಂದಿನ ಮೂರು ದಿನಗಳಲ್ಲಿ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರದ ಈ ನಿರ್ಧಾರ ದೇಶವನ್ನು 100 ವರ್ಷಗಳಷ್ಟು ಹಿಂದಕ್ಕೆ ಒಯ್ಯಲಿದೆ ಎಂದ ಅವರು, ೧೯೭೫ರ ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ಇಷ್ಟೊಂದು ಬಿಕ್ಕಟ್ಟು ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.