ನವದೆಹಲಿ : ವಿವಿಧ ಕಾರಣಗಳಿಂದಾಗಿ ದೇಶದ ವಿವಿಧೆಡೆ ತೆರವಾಗಿರುವ 4 ಲೋಕಸಭಾ ಹಾಗೂ 10 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಇಂದು ಅಂತ್ಯಗೊಂಡಿದ್ದು ಬಿಜೆಪಿ ಸುಮಾರು 17.47% ರಷ್ಟು ಹೆಚ್ಚುವರಿ ಮತಗಳನ್ನು ಪಡೆದಿದೆ ಎನ್ನಲಾಗಿದೆ.
ಉಪಚುನಾವಣೆಯ ಫಲಿತಾಂಶದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು, ‘ಬಿಜೆಪಿಯ ಉತ್ತಮ ಆಡಳಿತ ಮತ್ತು ಅಭಿವೃದ್ಧಿಯಲ್ಲಿ ವಿಶ್ವಾಸವನ್ನಿಟ್ಟುಕೊಂಡಿರುವ ಜನತೆಗೆ ನನ್ನ ಧನ್ಯವಾದಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
I thank people for the continued faith in BJP & in the BJP’s unwavering focus on development and good governance.
— Narendra Modi (@narendramodi) November 22, 2016
ಮಧ್ಯಪ್ರದೇಶ, ಅಸ್ಸಾಂ, ಅರುಣಾಚಲ ಪ್ರದೇಶಗಳಲ್ಲಿನ ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 3 ಕ್ಷೇತ್ರಗಳಲ್ಲಿ ಜಯ ಗಳಿಸಿದೆ.
ತಮಿಳುನಾಡಿನಲ್ಲಿ ಎಐಎಡಿಎಂಕೆ 3 ಕ್ಷೇತ್ರಗಳಲ್ಲಿ ಜಯ ಗಳಿಸಿದೆ.
ಮಧ್ಯಪ್ರದೇಶ ಹಾಗೂ ತ್ರಿಪುರಾದಲ್ಲಿ 2 ಕ್ಷೇತ್ರಗಳನ್ನು ಸಿಪಿಎಂ ಗಳಿಸಿದೆ.
ಪುದುಚೇರಿಯಲ್ಲಿ ಕಾಂಗ್ರೆಸ್ 1 ಕ್ಷೇತ್ರವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.
ನೋಟು ನಿಷೇಧದ ಬಳಿಕ ನಡೆದ ಈ ಉಪಚುನಾವಣೆ ಬಿಜೆಪಿಗೆ ಒಂದು ರೀತಿಯಲ್ಲಿ ಅಗ್ನಿ ಪರೀಕ್ಷೆಯೇ ಆಗಿತ್ತು. ನೋಟು ನಿಷೇಧದಿಂದ ಉಂಟಾಗಿರುವ ಆರ್ಥಿಕ ಮುಗ್ಗಟ್ಟು ಮುಂದುವರೆದಿದ್ದರೂ, ಉಪಚುನಾವಣೆಯಲ್ಲಿ ಬಿಜೆಪಿ ಮತಗಳನ್ನು ಹೇಗೆ ಪಡೆಯಲಿವೆ ಎಂಬ ಬಗ್ಗೆ ಕುತೂಹಲವಿತ್ತು. ಇದೀಗ ಎಲ್ಲಕ್ಕೂ ಉತ್ತರ ಸಿಕ್ಕಿದ್ದು, ಜನರು ನೋಟು ನಿಷೇಧ ನಿರ್ಧಾರವನ್ನು ಸ್ವಾಗತಿಸಿ, ದೇಶದ ಅಭಿವೃದ್ಧಿಗಾಗಿ ಈ ನಿರ್ಧಾರ ದಿಟ್ಟ ಹೆಜ್ಜೆ ಎಂದು ಪರಿಗಣಿಸಿ ಬಿಜೆಪಿಗೆ ಬಹುಮತವನ್ನು ಕೊಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.