ನವದೆಹಲಿ: ಪಾಕಿಸ್ಥಾನ ಆಗಾಗ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆ ಮತ್ತು ಭಯೋತ್ಪಾದನೆ ಪೋಷಣೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ.
ಸಾಪ್ತಾಹಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್, ವಿದೇಶಾಂಗ ಸಚಿವಾಲಯ ಕದನ ವಿರಾಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ಥಾನ ಡೆಪ್ಯುಟಿ ಹೈ-ಕಮಿಶನರ್ಗೆ ಸೂಚಿಸಿದೆ ಎಂದು ಹೇಳಿದ್ದಾರೆ.
ಭಯೋತ್ಪಾದನೆ ಮತ್ತು ದ್ವಿಪಕ್ಷೀಯ ಮಾತುಕತೆ ಜೊತೆಗೆ ನಡೆಯಲು ಸಾಧ್ಯವಿಲ್ಲ. ಮಾತುಕತೆ ನಡೆಸಲು ಭಯೋತ್ಪಾದನೆ ಮುಕ್ತ ವಾತಾವರಣದ ಅಗತ್ಯವಿದೆ. ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಕರಣಗೊಳಿಸುವುದರಿಂದ ಯಾವುದೇ ಫಲ ದೊರಕದು. ಭಯೋತ್ಪಾದನೆಗೆ ರಾಷ್ಟ್ರದ ಬೆಂಬಲವನ್ನು ಕೊನೆಗೊಳಿಸಲು ಪಾಕಿಸ್ಥಾನಕ್ಕೆ ಮೊದಲು ಸಲಹೆ ನೀಡಲಾಗುವುದು ಎಂದು ಸ್ವರೂಪ್ ಹೇಳಿದ್ದಾರೆ.
ಈ ಹಿಂಸಾತ್ಮಕ ಕೃಯಗಳು 2003ರ ಕದನ ವಿರಾಮ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. 16-21 ನವೆಂಬರ್ ನಡುವೆ ಭಾರತದ ಗಡಿಯಲ್ಲಿರುವ 18 ಗ್ರಾಮಗಳ ಮೇಲೆ ಪಾಕಿಸ್ಥಾನ ಉದ್ದೇಶಪೂರ್ವಕವಾಗಿ ನಡೆಸಿದ ದಾಳೀಯ ವಿರುದ್ಧ ಭಾರತ ಪ್ರತಿಭಟಿಸಿದೆ ಎಂದು ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಪಾಕ್ ವಿದೇಶಾಂಗ ಸಚಿವಾಲಯದ ಸಲಹೆಗಾರ ಸರ್ತಾಜ್ ಅಜೀಜ್ ಅವರು ಡಿಸೆಂಬರ್ 3 ಮತ್ತು 4ರಂದು ಅಮೃತಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.