ವಿಶ್ವ ಸಂಸ್ಥೆ: ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶದಲ್ಲಿ ಹದಗೆಟ್ಟಿರುವ ಪರಿಸ್ಥಿತ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್, ಈ ಪ್ರದೇಶದಲ್ಲಿ ಸ್ಥಿರವಾಗಿ ಪುನಃ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಎಲ್ಲ ಪ್ರಯತ್ನಗಳಿಗೂ ವಿಶ್ವ ಸಂಸ್ಥೆ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಭವಿಷ್ಯದಲ್ಲಿ ದಾಳಿ ಮತ್ತು ಜೀವ ಹಾನಿ ನಿಗ್ರಹಿಸಿ, ಶಾಂತಿ ಮತ್ತು ಸ್ಥಿರತೆಗೆ ಮಹತ್ವ ನೀಡುವಂತೆ ಕರೆ ನೀಡಿದ ಬಾನ್ ಕಿ ಮೂನ್, ಭಾರತ ಮತ್ತು ಪಾಕಿಸ್ಥಾನ ಶಾಂತಿಗಾಗಿ ಕಾರ್ಯ ನಿರ್ವಹಿಸಲು ಎಲ್ಲ ಪ್ರಯತ್ನಗಳನ್ನು ನಡೆಸುವ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ನ ಸೇನಾ ನೆಲೆ ಮೇಲೆ ಪಾಕಿಸ್ಥಾನದ ಭಯೋತ್ಪಾದಕ ದಾಳಿ ಮತ್ತು ಇದರ ಪರಿಣಾಮವಾಗಿ ಪಾಕ್ ಭಯೋತ್ಪಾದಕರ ಲಾಂಚ್ಪ್ಯಾಡ್ಗಳ ಮೇಲೆ ಭಾರತದ ಸರ್ಜಿಕಲ್ ದಾಳಿ ಬಳಿಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆತಂಕ ಮತ್ತು ಅಶಾಂತಿ ಹೆಚ್ಚಾಗಿದೆ. ಅಲ್ಲದೇ ಪಾಕ್ ಭಯೋತ್ಪಾದಕರಿಂದ ಗಡಿ ಉಲ್ಲಂಘನೆ ಹಾಗೂ ಭಾರತೀಯ ಸೈನಿಕರು ಮತ್ತು ನಾಗರಿಕರ ಸಾವಿನ ಸಂಖ್ಯೆ ಹೆಚ್ಚುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.