ನವದೆಹಲಿ: ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರು ‘ಏರ್ ಸೇವಾ’ ಎನ್ನುವ ಹೊಸ ವೆಬ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ಗೆ ಚಾಲನೆ ನೀಡಿದ್ದಾರೆ. ಈ ಆ್ಯಪ್ನ ಸಹಾಯದಿಂದ ವಿಮಾನ ಪ್ರಯಾಣಿಕರು ಯಾವುದೇ ತೊಂದರೆಯಿಲ್ಲದೆ ವಿಮಾನಯಾನ ಕೈಗೊಳ್ಳಲು ಅನುಕೂಲಕರವಾಗಿದೆ.
ಸಂತೋಷಕರ ಮತ್ತು ಡಿಜಿಟಲ್ ಪ್ರಯಾಣದ ಅನುಭವವನ್ನು ಪಡೆಯುವ ನಿಟ್ಟಿನಲ್ಲಿ ಈ ಪೋರ್ಟಲ್ ಕಾರ್ಯನಿರ್ವಹಿಸಲಿದೆ. ಈ ಈ ಹೊಸ ಉಪಕ್ರಮವು ವೆಬ್ ಮತ್ತು ಮೊಬೈಲ್ಗಳಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ ಹಾಗೂ ಐಒಎಸ್ಗಳಲ್ಲಿ ಲಭ್ಯವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.
ಈ ಪೊರ್ಟಲ್ ಅಥವಾ ಮೊಬೈಲ್ ಆ್ಯಪ್ನಲ್ಲಿ ಫ್ಲೈಟ್ ಸ್ಟೇಟಸ್, ವೇಳಾಪಟ್ಟಿ, ವಿಮಾನ ನಿಲ್ದಾಣದ ಮಾಹಿತಿ ಹಾಗೂ ಪ್ರಯಾಣಿಕರು ತಮ್ಮ ಕುಂದು ಕೊರತೆಗಳನ್ನು ದಾಖಲಿಸಿ ಅದಕ್ಕೆ ಪರಿಹಾರಕ್ರಮಗಳನ್ನು ಪಡೆಯಬಹುದಾಗಿದೆ ಎಂದು ವರದಿಯಾಗಿದೆ.
ಎಲ್ಲ ಏಜೆನ್ಸಿಗಳಿಂದ ನೋಡಲ್ ಅಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಇವರು ಕುಂದುಕೊರತೆಗಳ ನಿವಾರಣೆಗೆ ಸಹಾಯ ಮಾಡುತ್ತಾರೆ ಎಂದು ಸಚಿವಾಲಯ ಹೇಳಿದೆ.
ಪ್ರಯಾಣಿಕರಿಂದ ದೂರುಗಳನ್ನು ದಾಖಲಿಸಿಕೊಂಡು ಅದರ ಪರಿಹಾರ ಕ್ರಮವಾಗಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿಲಾಗುವುದು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.