ಹೈದರಾಬಾದ್: ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ಹೈದರಾಬಾದ್ನಲ್ಲಿ ರಾಷ್ಟ್ರೀಯ ಪೋಲಿಸ್ ಅಕಾಡೆಮಿಯಲ್ಲಿ ದೇಶದ ಪೋಲಿಸ್ ಅಧಿಕಾರಿಗಳೊಂದಿಗೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಪೋಲಿಸ್ ಪಡೆಗಳು, ಕೇಂದ್ರ ಅರೆಸೇನಾ ಪಡೆಗಳು ಮತ್ತು ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಲು ಬಂದಿದ್ದ ಪ್ರಧಾನಿಯವರು ಶುಕ್ರವಾರ ರಾತ್ರಿ ಸರದಾರ ವಲ್ಲಭಾಯಿ ಪಟೇಲ್ ರಾಷ್ಟ್ರೀಯ ಪೋಲಿಸ್ ಅಕಾಡೆಮಿಯಲ್ಲಿ ಉಳಿದುಕೊಂಡಿದ್ದರು.
ಡಿಜಿಪಿ, ಐಜಿಪಿ ಹಾಗೂ ಹಿರಿಯ ಅಧಿಕಾರಿಗಳ ಯೋಗಾಭ್ಯಾಸದಲ್ಲಿ ಭಾಗಿಯಾಗುವುದರ ಮೂಲಕ ಮೋದಿ ದಿನವನ್ನು ಆರಂಭಿಸಿದರು.
ಪ್ರಧಾನಿ ಮೋದಿ ಭಾರತದ ಪ್ರಥಮ ಗೃಹ ಮಂತ್ರಿ ಸರದಾರ ವಲ್ಲಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿ, ಅಕಾಡೆಮಿಯ ಆವರಣದಲ್ಲಿ ಸಸಿಗಳನ್ನು ನೆಟ್ಟರು ಎಂದು ಹೇಳಲಾಗಿದೆ. ನಂತರದಲ್ಲಿ ಪೋಲಿಸ್ ಅಧಿಕಾರಿಗಳೊಂದಿಗೆ ಉಪಹಾರವನ್ನು ಸೇವಿಸಿ, ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಐಪಿಎಸ್ ಅಧಿಕಾರಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದರು.
ಮೋದಿ ಜೊತೆ ಕೇಂದ್ರ ಗೃಹಮಂತ್ರಿ ರಾಜನಾಥ ಸಿಂಗ್ ಉನ್ನತ ಪೋಲಿಸ್ ಅಧಿಕಾರಿಗಳ 51 ನೇ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡು, ವಿವಿಧ ಭದ್ರತಾ ಸಂಬಂಧಿ ಸಮಸ್ಯೆಗಳ ಬಗ್ಗೆ ಪೋಲಿಸ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು.
ಶುಕ್ರವಾರ ಪ್ರಾರಂಭವಾಗಿದ್ದ ಈ ಸಮ್ಮೇಳನವು 3 ದಿನಗಳ ಕಾಲ ನಡೆಯಲಿದ್ದು ಗೃಹ ಮಂತ್ರಿ ರಾಜನಾಥ ಸಿಂಗ್ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದರು.
ರಾಜ್ಯದ ಗೃಹ ವ್ಯವಹಾರ ಮಂತ್ರಿಗಳು, ಕಿರಣ್ ರಿಜಿಜು ಮತ್ತು ಹಂಸರಾಜ ಗಂಗಾರಾಮ ಅಹಿರ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ ಮೆಹ್ರಿಶಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ ದೋವಲ್ ಹಾಗೂ ಇನ್ನಿತರ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.