ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 8ರಂದು ಕೈಗೊಂಡ ನೋಟು ನಿಷೇಧದ ನಿರ್ಧಾರವನ್ನು ವಿರೋಧಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸಮಸ್ಯೆ ಎದುರಿಸಲು ಮುಖ್ಯಮಂತ್ರಿಗಳ ಉಪ ಸಮಿತಿ ರಚಿಸಲು ನಿರ್ಧರಿಸಿದೆ.
ಯಾವುದೇ ಪೂರ್ವನಿರ್ಣಯ ಮತ್ತು ಕ್ರಮಗಳನ್ನು ಕೈಗೊಳ್ಳದೇ ಕೇಂದ್ರ ಸರ್ಕಾರ ಈ ನೋಟು ನಿಷೇಧಿಸಿದ್ದು, ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಡವರ ವಿರೋಧಿ ನೀತಿಯಾಗಿದ್ದು, ಜನಸಾಮಾನ್ಯರು ಹೆಚ್ಚು ಕಷ್ಟ ಅನುಭವಿಸುತ್ತಿದ್ದಾರೆ ಎಂದು ವಿಪಪಕ್ಷಗಳು ಆರೋಪಿಸಿವೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಒಡಿಸಾ ಮುಖ್ಯಮತ್ರಿ ನವೀನ್ ಪಟ್ನಾಯಕ್ ಕೇಂದ್ರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದು, ಇದು ಕಪ್ಪು ಹಣದ ವಿರುದ್ಧ ಹೋರಾಡಲು ಸಹಾಯಕವಾಗಲಿದೆ ಎಂಬ ನಂಬಿಕೆ ಇದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಇದು ಕೇಂದ್ರ ಸರ್ಕಾರದ ಅತಿ ದೊಡ್ಡ ಮಹತ್ವದ ಹೆಚ್ಚೆಯಾಗಿದೆ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.
ಇದೇ ವೇಳೆ ಶಿವಸೇನೆ, ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಂಡಿಲ್ಲ. ಇದು ಕಪ್ಪು ಹಣದ ಸಮಸ್ಯೆ ವಿರುದ್ಧ ಹೋರಾಡಲು ಒಂದು ಪಕ್ಷದ ಸರ್ವಾಧಿಕಾರವಲ್ಲ ಎಂದು ಹೇಳಿದೆ.
ಕಳೆದ ಕೆಲವು ದಿನಗಳಿಂದ ಕಂಡಂತೆ ಇಂದು ಕೂಡ ಲೋಕಸಭೆ ಅಧಿವೇಶನವನ್ನು ಮುಂದೂಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.