ನವದೆಹಲಿ: ಭಾರತವನ್ನು ನಗದು ರಹಿತ ಆರ್ಥಿಕ ರಾಷ್ಟ್ರವನ್ನಾಗಿ ಪರಿವರ್ತಿಸುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಇ-ವ್ಯಾಲೆಟ್ ಮತ್ತಿತರ ಡಿಜಿಟಲ್ ಪಾವತಿ ವಿಧಾನಗಳ ಲಾಭ ಮತ್ತು ಗುಣಗಳ ಬಗ್ಗೆ ತಿಳಿಸುವಂತೆ ಕೇಂದ್ರ ಹಿರಿಯ ಸಚಿವರಿಗೆ ಸೂಚಿಸಿದ್ದಾರೆ.
ಜನರು ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮತ್ತಿತರ ಡಿಜಿಟಲ್ ಪಾವತಿ ಮೂಲಕ ಅಗತ್ಯ ವಸ್ತುಗಳನ್ನು ಖರೀದಿಸುವಂತೆ ಪ್ರೇರೇಪಿಸಿದ ಪ್ರಧಾನಿ ಮೋದಿ ಅವರು, ನಗದು ಹಣದ ಮೇಲೆ ಹೆಚ್ಚು ಅವಲಂಬಿಸದೇ ಇರಲು ಹೇಳಿದ್ದಾರೆ.
ಮೂಲಗಳ ಪ್ರಕಾರ ಪ್ರಧಾನಿ ಮೋದಿ ಅವರು, ಕೇಂದ್ರ ಸಚಿವರು ತಮ್ಮ ಸಿಬ್ಬಂದಿ ವರ್ಗ, ಸಚಿವಾಲಯಗಳು ಮತ್ತು ಕ್ಷೇತ್ರಗಳ ಮೂಲಕ ನಗದು ರಹಿತ ಆರ್ಥಿಕತೆ ಕುರಿತು ಪ್ರಚಾರ ನಡೆಸುವಂತೆ ಮನವಿ ಮಾಡಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕೂಡ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಇತರ ಮಂತ್ರಿಗಳನ್ನು ಭೇಟಿ ಮಾಡಿ ಉಪ ಸಮಿತಿ ರಚಿಸಿ ನಗದು ರಹಿತ ಆರ್ಥಿಕತೆಗೆ ಪ್ರೇರೇಪಿಸುವಂತೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.