ನವದೆಹಲಿ: ದೇಶದ ಸೈನಿಕರ ತ್ಯಾಗವನ್ನು ರಾಜಕೀಯಗೊಳಿಸುವ ಪ್ರತಿಪಕ್ಷಗಳನ್ನು ತೀವ್ರವಾಗಿ ಟೀಕಿಸಿದ ಕೇಂದ್ರ ಸರ್ಕಾರ, ಸೈನಿಕರಿಗೆ ಅಗೌರವಿಸುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹಗುಲ್ ಗಾಂಧಿ ಅವರಲ್ಲಿ ಆಗ್ರಹಿಸಿದೆ.
ರಾಹುಲ್ ಗಾಂಧಿ ಅವರು ಮೊದಲು ಸೈನಿಕರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು. ಸೈನಿಕರ ತ್ಯಾಗವನ್ನು ನಾವು ಎಂದಿಗೂ ರಾಜಕೀಯಗೊಳಿಸಬಾರದು. ನಾವೆಲ್ಲರೂ ಅವರಿಗೆ ಜೊತೆಯಾಗಿ ಗೌರವ ಸಲ್ಲಿಸಬೇಕು. ಜೊತೆಯಾಗಿ ಗೌರವ ಸಲ್ಲಿಸಿದಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ನಾಗ್ರೋಟಾ ದಾಳಿಯ ವಿಚಾರವಾಗಿ ಪ್ರತಿಪಕ್ಷಗಳು ರಾಜ್ಯಸಭೆಯಿಂದ ಹೊರನಡೆದಿರುವುದು ಅತ್ಯಂತ ದುರದೃಷ್ಟಕರ. ಅವರು ಸದನದಲ್ಲಿ ಚರ್ಚೆ ನಡೆಸಬೇಕು. ಈ ವಿಚಾರವನ್ನು ರಾಜಕೀಯಗೊಳಿಸುತ್ತಿರುವುದು ದುರದೃಷ್ಟಕರ ಎಂದು ಪ್ರಸಾದ್ ಹೇಳಿದ್ದಾರೆ.
ಸೈನಿಕರ ತ್ಯಾಗದ ಕುರಿತು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಯಾವುದೇ ಮಾರ್ಗದರ್ಶನ ನೀಡುವ ಅಗತ್ಯವಿಲ್ಲ. ಸೈನಿಕರ ತ್ಯಾಗಕ್ಕೆ ಅವರಿಗೆ ಗೌರವಿಸುವ, ದೇಶದ ರಕ್ಷಣೆಗೆ ಕ್ರಮ ಕೈಗೊಳ್ಳುವ ಕರ್ತವ್ಯದ ಬಗ್ಗೆ ಸರ್ಕಾರ ತಿಳಿದಿದೆ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ್ ರಾಠೋಡ್ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ನಾಗ್ರೋಟಾ ಸೇನಾ ನೆಲೆ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಗೆ ಸಂತಾಪ ಸೂಚಿವ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳು ಬುಧವಾರ ಸದನದಿಂದ ಹೊರನಡೆದಿದ್ದರು.
ದೇಶದ ಸೈನಿಕರು ಅಥವಾ ಗಣ್ಯ ವ್ಯಕ್ತಿಗಳು ಮೃತಪಟ್ಟರೆ ಅವರಿಗೆ ಗೌರವ ಸಂತಾಪ ಸೂಚಿಸುವುದು ಸಂಸತ್ನ ನಿಯಮ ಮತ್ತು ಸಂಪ್ರದಾಯವಾಗಿದೆ. ಆದರೆ ಇದೇ ಮೊದಲ ಬಾರಿ ಇಂತಹ ಒಂದು ಘಟನೆ ಸಂಭವಿಸಿದೆ ಎಂದು ರಾಥೋಡ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.