ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಸೋಮವಾರ ತಡರಾತ್ರಿ ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿಯಾಗಿ ಒ. ಪನ್ನೀರಸೆಲ್ವಂ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಮಿಳುನಾಡಿನ ರಾಜ್ ಭವನ್ನಲ್ಲಿರುವ ರಾಜಾಜಿ ಹಾಲ್ನಲ್ಲಿ ರಾತ್ರಿ 12.15ಕ್ಕೆ ನಡೆದ ಸರಳ ಸಮಾರಂಭದಲ್ಲಿ ಪನ್ನೀರ ಸೆಲ್ವಂ ಹಾಗೂ ಇತರ 31 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮಿಳುನಾಡು ಗವರ್ನರ್ ಸಿ. ವಿದ್ಯಾಸಾಗರ್ ರಾವ್ ಪ್ರಮಾಣವಚನ ಬೋಧಿಸಿದರು.
ತಮಿಳುನಾಡಿನ 19ನೇ ಮುಖ್ಯಮಂತ್ರಿತಾಗಿ ಪನ್ನೀರ ಸೆಲ್ವಂ ಅವರು ಪ್ರಮಾಣವಚನ ಸ್ವೀಕರಿಸಿದ್ದು, ಎಐಎಡಿಎಂಕೆ ಶಾಸಕರ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದಾರೆ.
ಈ ಹಿಂದೆ ಎರಡು ಬಾರಿ 2001-02 ಮತ್ತು 2014-15ರಲ್ಲಿ ಮುಖ್ಯಮಂತ್ರಿಯಾಗಿ ಕರ್ಯ ನಿರ್ವಹಿಸಿದ್ದ ಪನ್ನೀರ ಸೆಲ್ವಂ, ತಮಿಳುನಾಡು ರಾಜ್ಯದ ಹಣಕಾಸು ಸಚಿವರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.