ನವದೆಹಲಿ: ಅನಾಣ್ಯೀಕರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದರ ವಿರುದ್ಧ ರಾಹುಲ್ ಗಾಂಧಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು, ಕಾಂಗ್ರೆಸ್ ಸರ್ಕಾರದ ಅಳ್ವಿಕೆಯ ಸಂದರ್ಭದಲ್ಲೇ ಕಪ್ಪು ಹಣದ ವ್ಯವಹಾರ ನಡೆದಿತ್ತು. ಆದ್ದರಿಂದ ಈಗ ಕೇಂದ್ರ ಸರ್ಕಾರವನ್ನು ಟೀಕಿಸುವ ನೈತಿಕ ಹಕ್ಕು ಕಾಂಗ್ರೆಸ್ಗಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಇನ್ನಷ್ಟು ಪಣತೊಟ್ಟರೂ ಅದು ಯಾವುದೇ ವಿಶ್ವಾಸಾರ್ಹತೆ ಹೊಂದಿಲ್ಲ. ಕಾಂಗ್ರೆಸ್ ಪಕ್ಷ ದೇಶವನ್ನು ಆಳಿ ದೇಶವನ್ನು ಲೂಟಿ ಮಾಡಿದೆ. ದೇಶದ ಯಾವುದೇ ವ್ಯಕ್ತಿ ಅದರ ಮೇಲೆ ವಿಶ್ವಾಸವನ್ನು ಇಟ್ಟುಕೊಂಡಿಲ್ಲ. ಕಾಂಗ್ರೆಸ್ನ ದುರಾಡಳಿತದಿಂದ ಇದು ಸಂಭವಿಸಿದೆ. ಕಪ್ಪು ಹಣ ನಿಗ್ರಹಿಸಲು ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಾಯ್ಡು ಹೇಳಿದ್ದಾರೆ.
ಕಾಂಗ್ರೆಸ್ ಆಡಳಿತ ಎಲ್ಲ ರೀತಿಯ ಹಗರಣಗಳಿಗೆ ಅವಕಾಶ ನೀಡಿತ್ತು. ಅದು ದೇಶವನ್ನು ಭ್ರಷ್ಟಾಚಾರದ ರೊಚ್ಚುಗುಂಡಿಗೆ ದೂಡಿದೆ. ಆದ್ದರಿಂದ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸುವ ಅಧಿಕಾರ ಕಾಂಗ್ರೆಸ್ ಹೊಂದಿಲ್ಲ ಎಂದು ನಾಯ್ಡು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಅವರನ್ನು ಪ್ರಶಂಸಿಸಿದ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಅವರು ಕಳೆದ ಎರಡು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಸರಿಪಡಿಸಿದ್ದಾರೆ. ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಅವರು ದೇಶದ ಜನತೆ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಗೌರವವನ್ನು ಪಡೆದಿದ್ದಾರೆ. ನಾವು ಅರ್ಥಶಾಸ್ತ್ರಜ್ಞ ಡಾ. ಮನ್ಮೋಹನ್ ಸಿಂಗ್ ಅವರು ತಂದೊಡ್ಡಿದ್ದ ಆರ್ಥಿಕ ನಷ್ಟ, ಚಾಲ್ತಿ ಖಾತೆ ನಷ್ಟವನ್ನು ಕುಗ್ಗಿಸಿದ್ದೇವೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ಅನಾಣ್ಯೀಕರಣ ನಿರ್ಧಾರದಿಂದ ದೇಶದ ಜನತೆ ದೀರ್ಘ ಕಾಲದ ಲಾಭ ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈಗ ಕಾಂಗ್ರೆಸ್ನ ಚುನಾವಣೆಯ ಗೆಲುವಿನ ನಿರೀಕ್ಷೆಗಳು ಕುಗ್ಗುತ್ತಿದ್ದು, ಅದು ನಿರಾಶೆಗೊಂಡಿದೆ ಎಂದು ನಾಯ್ಡು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.