ಚೆನ್ನೈ: ಅನಾಣ್ಯೀಕರಣ ವಿರುದ್ಧ ಕಾಂಗ್ರೆಸ್ ನೇತೃತ್ವದ ಎಂಟು ಪಕ್ಷಗಳನ್ನೊಳಗೊಂಡ ಸಭೆ ಏಕತೆಯ ನಕಲಿ ಪ್ರಯತ್ನವಾಗಿದೆ. ಅದು ಎಂದಿಗೂ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಚೆನ್ನೈಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ನಾಯ್ಡು ಅವರು, ಇದು ಒಗ್ಗಟ್ಟಿನ ನಕಲಿ ಪ್ರಯತ್ನವಾಗಿದೆ. ಯಾವುದೇ ಪ್ರಜ್ಞಾವಂತ ಪಕ್ಷ ಕಾಂಗ್ರೆಸ್ ಜೊತೆ ಕೈ ಜೋಡಿಸಲು ಸಾಧ್ಯವಿಲ್ಲ. ಒಂದು ವೇಳೆ ಅವರು (ಹಲವು ರಾಜಕೀಯ ಪಕ್ಷಗಳು) ಇದನ್ನು ಮಾಡುತ್ತಿದ್ದರೆ ಅವರು ತಮ್ಮದೇ ಹೊಣೆಗಾರಿಗೆಯಿಂದ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿದ ನಾಯ್ಡು ಅವರು, ರಾಹುಲ್ ಗಾಂಧಿ ಅವರು ತಮ್ಮದೇ ಪಕ್ಷದಲ್ಲಿ ಒಗ್ಗಟನ್ನು ತರಲು ವಿಫಲರಾಗಿದ್ದಾರೆ. ಅವರ ಪ್ರಾಬಲ್ಯ (ಲೋಕಸಭೆಯಲ್ಲಿ) ಕುಗ್ಗಿದ್ದು, 444 ಸ್ಥಾನಗಳಿಂದ 44 ಸ್ಥಾನಗಳಿಗೆ ಕುಸಿದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಆಡಳಿತದ ಹಗರಣಗಳು ಮತ್ತು ಭ್ರಷ್ಟಾಚಾರನ್ನು ಉಲ್ಲೇಖಿಸಿದ ವೆಂಕಯ್ಯ ನಾಯ್ಡು ಅವರು, ಹಿಂದೆ ವಿರೋಧ ಪಕ್ಷಗಳು ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಪ್ರತಿಭಟಿಸಬೇಕಿತ್ತು. ಆದರೆ ಈಗ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದರೆ, ವಿಪಕ್ಷಗಳು ಸರ್ಕಾರದ ವಿರುದ್ಧ ಹೋರಾಡುತ್ತಿದೆ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡೆ ಮಮತಾ ಬ್ಯಾನರ್ಜಿ ಅವರು ಇತರ ಪ್ರಾದೇಶಿಕ ಪಕ್ಷಗಳ ಜೊತೆ ಸಭೆ ನಡೆಸಿ, ಅನಾಣ್ಯೀಕರಣ ವಿರುದ್ಧ ಒಟ್ಟಾಗಿ ಹೋರಾಡಲು ಮತ್ತು ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.