ಗದಗ: ಬಹುಔಷಧೀಯ ಸಸ್ಯ ಸಂಪತ್ತನ್ನು ಹೊಂದಿರುವ ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಮಾಡಬೇಕು ಎಂದು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಹೇಳಿದರು.
ಅವರು ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಾಕೃತಿಕ ಸಂಪತ್ತು ದೈವದತ್ತವಾಗಿ ಬಂದದ್ದು, ಅದನ್ನು ಸೃಷ್ಟಿಸಲು ಅದ್ಯಾವ ಮನುಷ್ಯನಿಂದಲೂ ಸಾಧ್ಯವಿಲ್ಲ. ನಿಸರ್ಗದತ್ತವಾಗಿ ದೊರಕಿದ್ದನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದರು.
ವನ್ಯಜೀವಿಗಳಿಗೆ ಅಲ್ಲಿ ಆಹಾರವೇ ದೊರಕುವುದು ದುರ್ಲಭವಾಗಿದ್ದು, ನಗರ ಪ್ರದೇಶಗಳತ್ತ ಅವು ಬರುವಂಥ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು.
ಅರಣ್ಯ ಸಂಪತ್ತನ್ನು ಕಳೆದುಕೊಳ್ಳಬಾರದು, ಸರ್ಕಾರದ ಯೋಜನೆಗಳಿಗೆ ವೆಚ್ಚವಾಗುವ ಹಣ ಸಾರ್ವಜನಿಕರದ್ದಾಗಿದೆ ಎಂದು ಹೇಳಿದರು.
ಕಪ್ಪತ್ತಗುಡ್ಡದ ಸಂಪತನ್ನು ಸಂರಕ್ಷಿಸಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ. ತೋಂಟದಾರ್ಯ ಸ್ವಾಮೀಜಿಯವರ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದ ಅವರು, ಇದೇ ಜ.16 ರಂದು ನಾವೂ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಶಾಸಕ ಚಂದ್ರಕಾಂತ್ ಬೆಲ್ಲದ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.