ಹೈದರಾಬಾದ್ : ಸೈನಿಕ ಕಲ್ಯಾಣ ನಿಧಿ ಸ್ಥಾಪಿಸುವುದಾಗಿ ತೆಲಂಗಾಣ ಸರ್ಕಾರವು ನಿರ್ಧರಿಸಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಮಂಗಳವಾರ ಘೋಷಿಸಿದ್ದಾರೆ.
ರಾಜ್ಯದ ಯೋಧರಿಗೆ ಹಾಗೂ ಅವರ ಕುಟುಂಬಕ್ಕೆ ನೆರವು ನೀಡುವ ಸಲುವಾಗಿ ಸೈನಿಕ ಕಲ್ಯಾಣ ನಿಧಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಹೇಳಿದ್ದಾರೆ.
ಪ್ರತಿ ವರ್ಷ ಮುಖ್ಯಮಂತ್ರಿ ಹಾಗೂ ಸಚಿವರು ತಲಾ 25 ಸಾವಿರ ರೂ. ಹಾಗೂ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ತಲಾ 10 ಸಾವಿರ ರೂ.ಗಳನ್ನು ಸೈನಿಕ ಕಲ್ಯಾಣ ನಿಧಿಗೆ ನೀಡಲಿದ್ದಾರೆ. ಇದರಿಂದಾಗಿ ಪ್ರತಿ ವರ್ಷ ಸೈನಿಕ ಕಲ್ಯಾಣ ನಿಧಿಗೆ ಒಟ್ಟು 80 ಕೋಟಿ ರೂ. ಸಂಗ್ರಹವಾಗುತ್ತದೆ. ರಾಜ್ಯ ಸರ್ಕಾರದ ನೌಕರರೂ ಸಹ ಪ್ರತಿ ವರ್ಷ ತಮ್ಮ ಒಂದು ದಿನದ ವೇತನವನ್ನು ಸೈನಿಕ ಕಲ್ಯಾಣ ನಿಧಿಗೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಹೇಳಿದ್ದಾರೆ.
ಸೈನಿಕ ಕಲ್ಯಾಣ ನಿಧಿಯಲ್ಲಿ ಸಂಗ್ರಹವಾಗುವ ಹಣವನ್ನು ಹುತಾತ್ಮ ಯೋಧರಿಗೆ, ನಿವೃತ್ತ ಯೋಧರ ನೆರವಿಗೆ, ಅಂಗವೈಕಲ್ಯಕ್ಕೆ ತುತ್ತಾದ ಯೋಧರಿಗೆ, ಸೇವೆಯಲ್ಲಿರುವ ಯೋಧರ ಸಹಾಯಕ್ಕಾಗಿ ಬಳಸಲಾಗುವುದು. ಇದಲ್ಲದೆ ವಿವಿಧ ಪದಕ ಹಾಗೂ ಪ್ರಶಸ್ತಿಗಳನ್ನು ಪಡೆದ ಸೈನಿಕರಿಗೂ ಸೈನಿಕ ಕಲ್ಯಾಣ ನಿಧಿಯಿಂದ ಬಹುಮಾನವನ್ನು ನೀಡಲಾಗುವುದು ಎಂದು ಕೆ. ಚಂದ್ರಶೇಖರ್ ರಾವ್ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.