ನವದೆಹಲಿ: ಚುನಾವಣೆ ಪ್ರಚಾರದ ನಿಮಿತ್ತ ಬ್ಯಾನರ್ಗಳಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಚಿತ್ರವನ್ನು ಪಂಜಾಬ್ನಲ್ಲಿ ಕಾಂಗ್ರೆಸ್ ಪಕ್ಷ ಬಳಸಿಕೊಂಡಿದ್ದು, ಇದರ ವಿರುದ್ಧ ರಾಷ್ಟ್ರಪತಿ ಭವನದಿಂದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ರಾಷ್ಟ್ರಪತಿ ಭವನವು ಎಲ್ಲ ಪಕ್ಷಗಳಿಗೂ ಮೀರಿದ್ದು ಮತ್ತು ಪಕ್ಷಾತೀತವಾಗಿರುವುದು. ಆದ್ದರಿಂದ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪ್ರಣಬ್ ಮುಖರ್ಜಿಯವರ ಚಿತ್ರ ಬಳಸಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ರಾಷ್ಟ್ರಪತಿ ಕಚೇರಿ, ಮುಖ್ಯ ಚುನಾವಣಾ ಆಯುಕ್ತ ಡಾ.ನಜೀಮ್ ಜೈದಿ ಅವರಿಗೆ ಶೀಘ್ರವೇ ಈ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಕೆಲವು ಪತ್ರಿಕಾ ವರದಿಗಳನ್ನು ಪ್ರಸ್ತಾಪಿಸಿ ರಾಷ್ಟ್ರಪತಿಗಳ ಕಾರ್ಯದರ್ಶಿ ಒಮಿತಾ ಪೌಲ್ ಅವರು, ಚುನಾವಣಾ ಅಧಿಕಾರಿ ಡಾ.ನಜೀಮ್ ಅವರಿಗೆ ಪತ್ರ ಬರೆದಿದ್ದು, ಅನವಶ್ಯಕವಾಗಿ ರಾಷ್ಟ್ರಪತಿಗಳ ಭಾವಚಿತ್ರ ಬಳಸಿದ ಕಾಂಗ್ರೆಸ್ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.
ಈ ಪ್ರಕರಣವನ್ನು ತೀರಾ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಸ್ಥಳೀಯ ಅಧಿಕಾರಿಗಳಿಗೆ ಪರಿಶೀಲಿಸುವಂತೆ ಆದೇಶಿಸಲಾಗಿದೆ. ಲುಧಿಯಾನದ ಡೆಪ್ಯುಟಿ ಕಮೀಷನರ್ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕಾನೂನು ಉಲ್ಲಂಘನೆ ಆಗಿರುವ ಕುರಿತು ತನಿಖೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಿಯಮ ಉಲ್ಲಂಘಿಸಿದ್ದಲ್ಲಿ ಅವಶ್ಯಕ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.