ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಏಷಿಯನ್ ಸ್ಪೀಕರ್ಸ್ ಶೃಂಗಸಭೆಗೆ ಹಾಜರಾಗಲು ಭಾರತೀಯ ಸಂಸತ್ತು ಹಾಗೂ ಆಂತರಿಕ ಸಂಸತ್ತಿನ ಒಕ್ಕೂಟ ನೀಡಿದ್ದ ಆಹ್ವಾನವನ್ನು ಪಾಕ್ ತಿರಸ್ಕರಿಸಿದೆ.
ಫೆ.18 ಮತ್ತು 19 ರಂದು ಇಂದೋರ್ನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸುವ ಕುರಿತು ದಕ್ಷಿಣ ಏಷಿಯಾ ದೇಶಗಳಾದ ಪಾಕ್ ಹಾಗೂ ಮಾಯನ್ಮಾರ್ ನಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಾಗವಹಿಸದಿರಲು ಯಾವುದೇ ಕಾರಣವನ್ನು ನೀಡಿಲ್ಲ, ಆದರೆ ನಮಗೆ ಈ ಶೃಂಗಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದಷ್ಟೇ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಈ ಶೃಂಗಸಭೆಯು ಆಂತರಿಕ ಸಂಸತ್ತಿನ ಒಕ್ಕೂಟದ್ದಾಗಿದೆಯೇ ವಿನಃ ಇದು ಸಾರ್ಕ್ ಚಟುವಟಿಕೆಯಲ್ಲ. ಆದ್ದರಿಂದ ಆಫ್ಘಾನಿಸ್ಥಾನ, ಬಾಂಗ್ಲಾದೇಶ, ಭೂತಾನ್ ಮತ್ತು ಶ್ರೀಲಂಕಾದ ಸಂಸತ್ತಿನ ಸಭಾಧ್ಯಕ್ಷರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಈ ಶೃಂಗಸಭೆಯಲ್ಲಿ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಆಯಾ ದೇಶಗಳು ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದಲ್ಲಿ ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.