ನವದೆಹಲಿ: ಒದ್ದೆಯಾಗಿರುವ ಪಟಾಕಿಗಳಿಗಿಂತ, ಸಿಡಿಯುವ ಪಟಾಕಿಗಳಂತಹ ಬಹುದೊಡ್ಡ ಘೋಷಣೆಗಳನ್ನು ನಾವು ನಿರೀಕ್ಷಿಸಿದ್ದೆವು, ಆದರೆ ನಿರೀಕ್ಷೆ ಹುಸಿಯಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಕೇಂದ್ರ ಸಾಮಾನ್ಯ ಬಜೆಟ್ ಮಂಡನೆ ನಂತರ ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್ನಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿ, ರೈತರ ಪರ ಯಾವ ಘೋಷಣೆಗಳೂ ಆಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ರೈತರ ಸಮಸ್ಯೆಗಳು ಹಾಗೂ ಉದ್ಯೋಗ ಇಂದು ಸವಾಲಾಗಿದ್ದು ಆ ಕುರಿತು ಬಜೆಟ್ ಏನನ್ನೂ ಪರಿಹಾರ ಸೂಚಿಸಿಲ್ಲ. ಈ ಬಜೆಟ್ನಿಂದ ಯುವ ಸಮೂಹಕ್ಕೆ ಯಾವುದೇ ರೀತಿ ಅನುಕೂಲವಾಗಿಲ್ಲ ಎಂದು ರಾಹುಲ್ ಪ್ರತಿಕ್ರಿಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.